ಸೀಲಿಂಗ್ ಕುಸಿತ 
ರಾಜ್ಯ

ಬೆಂಗಳೂರು: ಸೀಲಿಂಗ್ ಕುಸಿದು ಬಿದ್ದು ಅವಘಡ, ಕ್ವಾರಂಟೈನ್‌ನಲ್ಲಿದ್ದವರು ಪಾರು

ಹೊರದೇಶದಿಂದ ಬಂದು ನಗರದ ಮೆಜೆಸ್ಟಿಕ್ ಬಳಿ ಕ್ವಾರಂಟೈನ್‌ ನಲ್ಲಿ ಉಳಿದುಕೊಂಡಿರುವ ಕುಟುಂಬವೊಂದು ಹೋಟೆಲ್ ನಲ್ಲಿ ಸಂಭವಿಸಿದ ಅವಘಡದಿಂದ ಪ್ರಾಣಾಪಾಯದಿಂದ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ನಡೆದಿದೆ.

ಬೆಂಗಳೂರು: ಹೊರದೇಶದಿಂದ ಬಂದು ನಗರದ ಮೆಜೆಸ್ಟಿಕ್ ಬಳಿ ಕ್ವಾರಂಟೈನ್‌ ನಲ್ಲಿ ಉಳಿದುಕೊಂಡಿರುವ ಕುಟುಂಬವೊಂದು ಹೋಟೆಲ್ ನಲ್ಲಿ ಸಂಭವಿಸಿದ ಅವಘಡದಿಂದ ಪ್ರಾಣಾಪಾಯದಿಂದ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ನಡೆದಿದೆ.

ವಿದೇಶದಿಂದ ಬಂದು ಮೆಜೆಸ್ಟಿಕ್ ಬಳಿ ಹೋಟೆಲ್ ಒಂದರಲ್ಲಿ ಹಣ ಪಾವತಿಸಿ ಮೀನಾಕ್ಷಿ ವೆಂಕಟರಮಣ ಎನ್ನುವರ ಕುಟುಂಬ ತಂಗಿತ್ತು. ಮೀನಾಕ್ಷಿ ಅವರು ಸ್ನಾನ ಮಾಡುವಾಗ ಹೋಟೆಲ್‌ನ ಬಾತ್‌ರೂಮ್‌ನ ಸೀಲಿಂಗ್ ಕುಸಿದು ಬಿದ್ದದ್ದು ಮೀನಾಕ್ಷಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಸೀಲಿಂಗ್ ಅವಸ್ಥೆ ಬಗ್ಗೆ ಮೀನಾಕ್ಷಿ ಅವರು ಹೋಟೆಲ್ ಸಿಬ್ಬಂದಿ ಗಮನಕ್ಕೆ ತಂದಿದ್ದರೂ ಹೋಟೆಲ್‌ ನವರು ನಿರ್ಲಕ್ಷ್ಯವಹಿಸಿದ್ದರು ಎಂದು ಮೀನಾಕ್ಷಿ ಆರೋಪಿಸಿದ್ದಾರೆ. ಈ ಬಗ್ಗೆ ಮಾಹಿತಿಯನ್ನು ಮೀನಾಕ್ಷಿ ಅವರ ಮಗ ಟ್ವಿಟ್ಟರ್‌ಗೆ ಹಾಕಿ ಕ್ಟಾರಂಟೈನ್ ವ್ಯವಸ್ಥೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾವು ಇಲ್ಲಿಗೆ ಏಳು ದಿನಗಳು ಬಂದಿದ್ದೇವೆ. ಆದರೆ, ನಮ್ಮ ಸ್ವ್ಯಾಬ್ ಪರೀಕ್ಷೆಯನ್ನು ಯಾವಾಗ ಮಾಡಲಾಗುತ್ತದೆ ಎಂದು ನಮಗೆ ತಿಳಿದಿಲ್ಲ.

ನಾವು ವಿಚಾರಿಸಿದಾಗ, ಹಿರಿಯ ನಾಗರಿಕರು, ಗರ್ಭಿಣಿಯರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಪರೀಕ್ಷಿಸಲು ಅಧಿಕಾರಿಗಳಿಗೆ ಮಾತ್ರ ಆದೇಶವಿದೆ ಎಂದು ನಮಗೆ ತಿಳಿಸಿದ್ದಾರೆ. ನಮ್ಮನ್ನು ಇಂತಹ ಕೆಟ್ಟ ಹೋಟೆಲ್‌ನಲ್ಲಿ ಉಳಿಯಲು ಬಿಟ್ಟು ಹೋಟೆಲ್ ಬಿಲ್ ಕಟ್ಟಿಸುತ್ತಿದ್ದಾರೆ'' ಎಂದು ಮೀನಾಕ್ಷಿ ಅವರು ದೂರಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT