ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್-19: ಲಕ್ಷಣಗಳಿಲ್ಲದಿದ್ದರೂ ವಿದೇಶಗಳಿಂದ ಬಂದ ಎಲ್ಲಾ ಪ್ರಯಾಣಿಕರಿಗೂ ಕ್ವಾರಂಟೈನ್ ಕಡ್ಡಾಯ!

ಕೊರೋನಾ ಮಾರ್ಗಸೂಚಿಗಳನ್ನು ಮರುಪರಿಶೀಲನೆ ನಡೆಸಿರುವ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು, ಲಕ್ಷಣ ಇದ್ದರೂ, ಇಲ್ಲದೇ ಹೋದರೂ ವಿದೇಶಗಳಿಂದ ಬಂದ ಪ್ರತೀಯೊಬ್ಬ ಪ್ರಯಾಣಿಕನಿಗೂ ಕ್ವಾರಂಟೈನ್ ಕಡ್ಡಾಯ ಎಂದು ಸ್ಪಷ್ಟಪಡಿಸಿದೆ. 

ಬೆಂಗಳೂರು: ಕೊರೋನಾ ಮಾರ್ಗಸೂಚಿಗಳನ್ನು ಮರುಪರಿಶೀಲನೆ ನಡೆಸಿರುವ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು, ಲಕ್ಷಣ ಇದ್ದರೂ, ಇಲ್ಲದೇ ಹೋದರೂ ವಿದೇಶಗಳಿಂದ ಬಂದ ಪ್ರತೀಯೊಬ್ಬ ಪ್ರಯಾಣಿಕನಿಗೂ ಕ್ವಾರಂಟೈನ್ ಕಡ್ಡಾಯ ಎಂದು ಸ್ಪಷ್ಟಪಡಿಸಿದೆ. 

ಲಕ್ಷಣ ಇರುವ ಹಾಗೂ ಲಕ್ಷಣ ಇಲ್ಲದಿರುವವರಿಗೆ ವಿಧಿಸುವ ಕ್ವಾರಂಟೈನ್ ನಲ್ಲಿ ಅಲ್ಪ ಮಟ್ಟಿನ ವ್ಯತ್ಯಾಸಗಳಿರಲಿವೆ. ಲಕ್ಷಣ ಕಾಣಿಸಿಕೊಂಡ ಪ್ರಯಾಣಿಕರನ್ನು 14 ದಿನಗಳ ಐಸೋಲೇಷನ್ ಆಸ್ಪತ್ರೆಗಳಲ್ಲಿ ಸಾಂಸ್ಥಿಕ ಕ್ವಾರಂಟೈನ್ ನಲ್ಲಿರಿಸಲಿದ್ದು, ಲಕ್ಷಣ ಇಲ್ಲದಿರುವವರನ್ನು 14 ದಿನಗಳ ಕಾಲ ಹೋಟೆಲ್ ಗಳಲ್ಲಿ ಸಾಂಸ್ಥಿಕ ಕ್ವಾರಂಟೈನ್ ನಲ್ಲಿರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರನ್ನು ತಪಾಸಣೆ ನಡೆಸಲಾಗುತ್ತಿದ್ದು, ಲಕ್ಷಣ ಇಲ್ಲದ ಪ್ರಯಾಣಿಕರ ಕೈಗಳ ಮೇಲೆ ಸಾಂಸ್ಥಿಕ ಕ್ವಾರಂಟೈನ್ ನಲ್ಲಿರುವಂತೆ ಮುದ್ರೆ ಹಾಕಲಾಗುತ್ತಿದೆ. ಗರ್ಭಿಣಿ ಮಹಿಳೆಯರು, 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಲು, 80 ವರ್ಷಕ್ಕಿಂತಲೂ ಹೆಚ್ಚಿನ ಹಿರಿಯ ನಾಗರೀಕರನ್ನು ಆರ್'ಟಿ ಹಾಗೂ ಪಿಸಿಆರ್ ತಂತ್ರದ ಮೂಲಕ ಪರೀಕ್ಷೆಗೊಳಪಡಿಸಲಾಗುತ್ತದೆ. ಪರೀಕ್ಷೆಯಲ್ಲಿ ವೈರಸ್ ಇಲ್ಲ ಎಂದು ದೃಢಪಟ್ಟರೂ ಕೂಡ 14 ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿರುವಂತೆ ಮುದ್ರೆ ಹಾಕಲಾಗುತ್ತದೆ. ಲಕ್ಷಣ ಕಂಡು ಬಂದರೆ, ಆಸ್ಪತ್ರೆಗಳಲ್ಲಿ ಐಸೋಲೇಷನ್ ನಲ್ಲಿರಿಸಲಾಗುತ್ತದೆ. ಎಲ್ಲಾ ಪರೀಕ್ಷೆಗಳಲ್ಲೂ ವೈರಸ್ ಇರುವುದು ದೃಢಪಟ್ಟಿದ್ದ ಆದರೆ, ಕೂಲೇ ಕೋವಿಡ್ ಆಸ್ಪತ್ರೆಗಳಲ್ಲಿ ದಾಖಲಿಸಲಾಗುತ್ತದೆ 

ಲಕ್ಷಣ ಇಲ್ಲದವರನ್ನು ಹಾಸ್ಟೆಲ್ ಹಾಗೂ ಹೋಟೆಲ್ ಗಳಲ್ಲಿ ಕ್ವಾರಂಟೈನ್ ನಲ್ಲಿಸಿ 12 ಮತ್ತು 14 ದಿನಗಳಿಗೊಮ್ಮೆ ಪರೀಕ್ಷೆ ನಡೆಸಲಾಗುತ್ತದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ಕರ್ನಾಟಕದ ಇತಿಹಾಸದಲ್ಲೇ ಮೊದಲು; ಪ್ರತಿಭಟಿಸುವುದಾದರೇ ಸದನದ ಬಾವಿಗೆ ಬನ್ನಿ: ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ, ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!