ಸುರೇಶ್ ಕುಮಾರ್ 
ರಾಜ್ಯ

ವಾಟ್ಸಪ್ ಸಂದೇಶ ನೋಡಿ ಕನ್ನಡ ಶಾಲೆ ಉಳಿವಿಗೆ ಆಗಮಿಸಿದ ಸಚಿವ ಸುರೇಶ್ ಕುಮಾರ್

ವಾಟ್ಸಪ್ ಸಂದೇಶ ನೋಡಿ ಶಾಲೆ ಉಳಿವಿಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶತಮಾನದ ಇತಿಹಾಸ ಇರುವ ಸಕಲೇಶಪುರ ತಾಲ್ಲೂಕಿನ ದೇವಲಕೆರೆ ಶಾಲೆಗೆ ಇಂದು ಭೇಟಿ ನೀಡಿದರು.

ಹಾಸನ: ವಾಟ್ಸಪ್ ಸಂದೇಶ ನೋಡಿ ಶಾಲೆ ಉಳಿವಿಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶತಮಾನದ ಇತಿಹಾಸ ಇರುವ ಸಕಲೇಶಪುರ ತಾಲ್ಲೂಕಿನ ದೇವಲಕೆರೆ ಶಾಲೆಗೆ ಇಂದು ಭೇಟಿ ನೀಡಿದರು.

ಗ್ರಾಮಸ್ಥರು ಹಾಗೂ ದಾನ ನೀಡಿದ‌ ಕುಟುಂಬದೊಂದಿಗೆ ಸಭೆ ನಡೆಸಿದ ಸಚಿವರು, ಶಾಲೆಯ ಹಿತದೃಷ್ಟಿಯಿಂದ ಶೀಘ್ರವೇ ನ್ಯಾಯ ಸಮ್ಮತ ತೀರ್ಮಾನ ಪ್ರಕಟಿಸುವುದಾಗಿ ಭರವಸೆ ನೀಡಿದರು.
ಶಾಲಾ ಕಟ್ಟಡ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರ‌ ಫೇಸ್ ಬುಕ್ ಅಭಿಯಾ‌ನವನ್ನು ಇತ್ತೀಚೆಗೆ ಸಚಿವರು ಫೇಸ್‌ಬುಕ್‌ ವೀಡಿಯೋ ನೋಡಿದ್ದರು. 

1911 ರಲ್ಲಿ ಗ್ರಾಮದ ಶಿವೇಗೌಡ ಅವರು ದಾನಕೊಟ್ಟಿದ್ದ ಸ್ಥಳದಲ್ಲಿ ಈ ಶಾಲೆ ನಿರ್ಮಿಸಲಾಗಿದ್ದು, 2008 ರಲ್ಲಿ ಹೊಸ ಕಟ್ಟಡ ಕಟ್ಟಿ ಶಾಲೆ ಸ್ಥಳಾಂತರ ಮಾಡಲಾಗಿತ್ತು. ಸ್ಥಳಾಂತರ ಬಳಿಕ ಈ ಕಟ್ಟಡ ಪಾಳುಬಿದ್ದಿತ್ತು. ಕಟ್ಟಡ ದುರಸ್ತಿ ಮಾಡಲು ಹಳೆ ವಿದ್ಯಾರ್ಥಿಗಳು ಮುಂದಾಗಿದ್ದರೂ ಈ ವೇಳೆ ಜಾಗ ದಾನ ಕೊಟ್ಟ ಶಿವೇಗೌಡರ‌ ಕುಟುಂಬಸ್ಥರು ಅದಕ್ಕೆ ಅಡ್ಡಿ ಪಡಿಸಿದ್ದರು. ದುರಸ್ತಿಗಾಗಿ ಮೇಲ್ಛಾವಣಿ ತೆಗೆದ ಬಳಿಕ ಕುಟುಂಬಸ್ಥರು ಅಡ್ಡಿ ಪಡಿಸಿದ್ದರು. ಆಗ ಶಾಲೆಯ ದುರಸ್ತಿಗೆ ಅವಕಾಶ ನೀಡಿ ಎಂದು ಗ್ರಾಮಸ್ಥರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

'ಕುವೆಂಪು ನಾಡಕವಿಯಲ್ಲ, ರಾಷ್ಟ್ರಕವಿ': ಬಿ.ವೈ. ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!

SCROLL FOR NEXT