ಸಂಗ್ರಹ ಚಿತ್ರ 
ರಾಜ್ಯ

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಆಯುಷ್ ಇಲಾಖೆ ವೈದ್ಯರು :ತುರ್ತು ಸಭೆ ಕರೆದ ಆರೋಗ್ಯ ಸಚಿವರು

ಸಮಾನ ಕೆಲಸಕ್ಕಾಗಿ ಸಮಾನ ವೇತನ ನಿಯಮ ಜಾರಿಗೆ ಒತ್ತಾಯಿಸಿ ಮೇ 23 ರಿಂದ ಆಯುಷ್ ಇಲಾಖೆ ವೈದ್ಯರು ಅನಿರ್ದಿಷ್ಟಾವಧಿ ಹೋರಾಟಕ್ಕೆ ಕೈಗೊಂಡಿದ್ದಾರೆ.

ಬೆಂಗಳೂರು: ಸಮಾನ ಕೆಲಸಕ್ಕಾಗಿ ಸಮಾನ ವೇತನ ನಿಯಮ ಜಾರಿಗೆ ಒತ್ತಾಯಿಸಿ ಮೇ 23 ರಿಂದ ಆಯುಷ್ ಇಲಾಖೆ ವೈದ್ಯರು ಅನಿರ್ದಿಷ್ಟಾವಧಿ ಹೋರಾಟಕ್ಕೆ ಕೈಗೊಂಡಿದ್ದಾರೆ.

ಇಂದಿನಿಂದ ರಾಜ್ಯದ 2000 ಸರ್ಕಾರಿ ವೈದ್ಯರು ಹಾಗೂ 27000 ಖಾಸಗಿ ವೈದ್ಯರು ಹಾಗೂ 570 ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು ರೋಗಿಗಳು ಮತ್ತು ಸಾರ್ವಜನಿಕರಿಗೆ ಸಮಸ್ಯೆ ಎದುರಾಗಿದೆ.

ಸಾಮೂಹಿಕವಾಗಿ ಕೆಲಸ ಸ್ಥಗಿತಗೊಳಿಸಿರುವ ಆಯುಷ್ ವೈದ್ಯರು, ಆಯುಷ್ ಫೆಡರೇಷನ್ ಆಫ್ ಇಂಡಿಯಾ ಸಂಘಟನೆಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗಳಿಗೆ ತೆರಳಿ ನಿನ್ನೆಯಷ್ಟೇ ಮನವಿ ಪತ್ರ ಸಲ್ಲಿಸಿದ್ದರು. 

ಮನವಿ ಪತ್ರದಲ್ಲಿ, ರಾಜ್ಯ ಸರ್ಕಾರ 300 ಆಯುಷ್ ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಂಡು ಎಂಬಿಬಿಎಸ್ ವೈದ್ಯರು ಇಲ್ಲದ ಕಡೆಗಳಲ್ಲಿ ಆರೋಗ್ಯ ಕೇಂದ್ರಗಳನ್ನು ನಡೆಸುತ್ತಿದೆ. ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ 650 ಹಾಗೂ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಅಡಿಯಲ್ಲಿ 1,000 ಆಯುಷ್ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ. 

ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ 16 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ವೈದ್ಯರಿಗೆ ಮಾಸಿಕ ರೂ. 20,300, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿಯ ವೈದ್ಯರಿಗೆ ರೂ. 31,440 ಹಾಗೂ ಎಂಬಿಬಿಎಸ್ ವೈದ್ಯರು ಇಲ್ಲದ ಕಡೆ ಕೆಲಸ ನಿರ್ವಹಿಸುತ್ತಿರುವ ಆಯುಷ್ ವೈದ್ಯರಿಗೆ ರೂ. 26,000 ವೇತನ ಮಾತ್ರ ಕೊಡಲಾಗುತ್ತಿದೆ. 16 ವರ್ಷಗಳ ಅವಧಿಯಲ್ಲಿ ಒಂದು ಬಾರಿ ಮಾತ್ರ ಕೇವಲ ಶೇ 5 ರಷ್ಟು ವೇತನ ಹೆಚ್ಚಳ ಮಾಡಲಾಗಿದೆ. 

ಆರೋಗ್ಯ ಉಪ ಕೇಂದ್ರಗಳಲ್ಲಿ ಮಿಡಲ್ ಲೇವರ್ ಹೆಲ್ತ್ ಪ್ರೋವೈಡರ್ ಆಗಿರುವ ಬಿ.ಎಸ್ಸಿ ನರ್ಸಿಂಗ್ ಪದವೀಧರರಿಗೆ ರೂ. 32,000 ವೇತನ ಕೊಡಲಾಗುತ್ತಿದೆ. ಆದರೆ, ಆಯುಷ್ ವೈದ್ಯರಿಗೆ ಕೇವಲ ರೂ. 20,000 ವೇತನ ನೀಡಲಾಗುತ್ತಿದೆ. ಇದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT