ಸಂಗ್ರಹ ಚಿತ್ರ 
ರಾಜ್ಯ

ಬಿಎಂಟಿಸಿ ಬಸ್‌ ಪ್ರಯಾಣ: ದಿನದ ಪಾಸ್ ದರ ಇಳಿಕೆ; ಮೇ 26ರಿಂದ ಪರಿಷ್ಕೃತ ದರ ಪ್ರಕಟ

ಲಾಕ್ ಡೌನ್ ನಂತರ ಕಷ್ಟದಲ್ಲಿದ್ದಂತ ಪ್ರಯಾಣಿಕರ ಒತ್ತಡಕ್ಕೆ ಇದೀಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಮಣಿದು ಪಾಸ್ ದರವನ್ನು ಕಡಿಮೆ ಮಾಡಿದೆ. 

ಬೆಂಗಳೂರು: ಲಾಕ್ ಡೌನ್ ನಂತರ ಕಷ್ಟದಲ್ಲಿದ್ದಂತ ಪ್ರಯಾಣಿಕರ ಒತ್ತಡಕ್ಕೆ ಇದೀಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮಣಿದು ಪಾಸ್ ದರವನ್ನು ಕಡಿಮೆ ಮಾಡಿದೆ. 

ಪ್ರಯಾಣಿಕರ ಒತ್ತಡಕ್ಕೆ ಮಣಿದ ಬಿಎಂಟಿಸಿ, ಇದೀಗ ದಿನದ ಪಾಸ್ ದರವನ್ನು ರೂ.70 ರಿಂದ ರೂ.50ಕ್ಕೆ ಇಳಿಕೆ ಮಾಡಿದ್ದು ಮೂಲಕ ಬಿಎಂಟಿಸಿ ಬಸ್ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿದೆ. 

ಈ ಕುರಿತಂತೆ ಮಾಹಿತಿ ನೀಡಿರುವ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಬಿಎಂಟಿಸಿ ದಿನದ ಪಾಸ್ ದರವನ್ನು ಪ್ರಯಾಣಿಕರ ಹಿತದೃಷ್ಟಿಯಿಂದ ಏರಿಕೆ ಮಾಡಲಾಗಿತ್ತು. ಇದೀಗ ದಿನದ ಪಾಸ್ ದರವನ್ನು ರೂ.70 ರಿಂದ 50 ರೂಪಾಯಿಗೆ ಇಳಿಕೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

ಅಲ್ಲದೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕರಿಗೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಸಲುವಾಗಿ ಕೊರೊನಾ ಹರಡುವಿಕೆಯನ್ನು ಕಡಿಮೆಮಾಡುವ ದೃಷ್ಟಿಯಿಂದ ಪಾಸುಗಳ ಹೊಂದಿದವರು ಸಾರಿಗೆ ವಾಹನದಲ್ಲಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಲಾಗಿತ್ತು. 

ಸಾರ್ವಜನಿಕರ ಬೇಡಿಕೆಯಂತೆ, ಪ್ಲಾಟ್ ದರದ ಬಗ್ಗೆ ಪ್ರಸ್ತಾಪನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಅದರಂತೆ, ಸರ್ಕಾರವು ಪ್ಲಾಟ್ ದರವನ್ನು ಪ್ರಯಾಣಿಕರಿಂದ ಪಡೆಯಲು ಒಪ್ಪಿಗೆಯನ್ನು ಸೂಚಿಸಿದ್ದು ಮೇ 26ರಿಂದ ಪ್ಲಾಟ್ ದರ ಕಾರ್ಯರೂಪಕ್ಕೆ ತರಲು ಬೆ.ಮ.ಸಾ.ಸಂಸ್ಥೆಯು ಸಿದ್ಧತೆಯನ್ನು ಮಾಡಿಕೊಂಡಿದೆ.

ಅದರಂತೆ, 2 ಕಿ.ಮೀ.ವರೆಗೆ 5 ರೂಪಾಯಿ, 3 ರಿಂದ 4 ಕಿ.ಮೀ.ವರೆಗೆ 10 ರೂ., 5 ರಿಂದ 6 ಕಿ.ಮೀ.ವರೆಗೆ 15 ರೂ., 7 ರಿಂದ 14 ಕಿ.ಮೀ. ವರೆಗೆ 20 ರೂ. ಹಾಗೂ 41 ಕಿ.ಮೀ.ನಿಂದ ಹಾಗೂ ಹೆಚ್ಚಿನ ದೂರದವರೆಗೆ 30 ರೂ. ದರ ನಿಗದಿಪಡಿಸಲಾಗಿದೆ.

ಸಾರ್ವಜನಿಕ ಪ್ರಯಾಣಿಕರಿಗೆ ಚಿಲ್ಲರೆ ಕೊಟ್ಟು ಸಹಕರಿಸ ಬೇಕು. ಪ್ರಯಾಣಿಕರ ಹಿತದೃಷ್ಟಿಯಿಂದ, ಬೆ.ಮ.ಸಾ. ಸಂಸ್ಥೆಯ ಸಾರಿಗೆಯಲ್ಲಿ ಪ್ರಯಾಣಿಸುವಾಗ ತಪ್ಪದೆ ಮುಖಗವಸುಗಳನ್ನು ಖಡ್ಡಾಯವಾಗಿ ಧರಿಸಬೇಕು. ಪ್ರಯಾಣಿಕರು ಜನ ದಟ್ಟಣೆ ಆಗದಂತೆ ಸಹಕರಿಸಬೇಕು ಎಂದು ಸಂಸ್ಥೆ ಮನವಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT