ಸೋಮಶೇಖರ್ 
ರಾಜ್ಯ

ಎರವಲು ಹಿರಿಯ ಅಧಿಕಾರಿಗಳು ಮರಳಿ ಮಾತೃ ಇಲಾಖೆಗೆ ಬನ್ನಿ: ಸಹಕಾರ ಸಚಿವ ಸೋಮಶೇಖರ್

ವಿವಿಧ ಇಲಾಖೆಗಳಲ್ಲಿ ಎರವಲು ಸೇವೆಯಮೇಲೆ ಕೆಲಸ ಮಾಡುತ್ತಿರುವವರು ಮಾತೃ ಇಲಾಖೆಗೆ ಹಿಂದಿರುಗಲು ಕ್ರಮ ಕೈಗೊಳ್ಳುವಂತೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಎರವಲು ಸೇವೆಯಮೇಲೆ ಕೆಲಸ ಮಾಡುತ್ತಿರುವವರು ಮಾತೃ ಇಲಾಖೆಗೆ ಹಿಂದಿರುಗಲು ಕ್ರಮ ಕೈಗೊಳ್ಳುವಂತೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ. 

ಸಹಕಾರ ಇಲಾಖೆ ಹಾಗೂ ಲೆಕ್ಕ ಪರಿಶೋಧನಾ ಇಲಾಖೆಯಿಂದ ಉಪ ನಿಬಂಧಕರು, ಉಪ ನಿರ್ದೇಶಕರು, ಜಂಟಿ ನಿಬಂಧಕರು, ಜಂಟಿ ನಿರ್ದೇಶಕರು ಹಾಗೂ ಅಪರ ನಿಬಂಧಕರು, ಅಪರ ನಿರ್ದೇಶಕರು ಹಾಗೂ ಸಚಿವರ ಆಪ್ತ ಕಾರ್ಯದರ್ಶಿ ಹೀಗೆ ಹಲವಾರು ವರ್ಷಗಳಿಂದ ಇನ್ನಿತರ ಇಲಾಖೆಯಲ್ಲಿ ನಿಯೋಜನೆಗೊಂಡು ಕಾರ್ಯನಿರ್ವಹಿಸುತ್ತಿದ್ದು, ಇಂತಹವರನ್ನು ಕೂಡಲೇ ಮಾತೃ ಇಲಾಖೆಗೆ ಹಿಂದುರುವಂಗೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.

ಹಲವು ಅಧಿಕಾರಿಗಳು ಸಹಕಾರ ಇಲಾಖೆಯಲ್ಲಿ ಹುದ್ದೆಗೆ ಸೇರಿದ ಅಧಿಕಾರಿಗಳು ಬಳಿಕ ಲಾಭದಾಯಕ ಇಲಾಖೆಗಳಿಗೆ ಡೆಪ್ಯುಟೇಷನ್ ಮೇಲೆ ತೆರಳುತ್ತಿದ್ದರು. ಇದರಿಂದಾಗಿ ಸಹಕಾರ ಇಲಾಖೆಯಲ್ಲಿ ಅಧಿಕಾರಿಗಳು ಲೆಕ್ಕಕ್ಕ ಮಾತ್ರ ಸಿಗುತ್ತಿದ್ದರೂ ಆದರೆ ಕೆಲಸಕ್ಕೆ ಮಾತ್ರ ಸಿಬ್ಬಂದಿಗಳಿ ಸಿಗುತ್ತಿರಲಿಲ್ಲ. 

ಈ ಮೊದಲು ಸಹಕಾರ ಇಲಾಖೆ ಹಾಗೂ ಲೆಕ್ಕ ಪರಿಶೋಧನೆ ಇಲಾಖೆಗೆಂದು ನೇಮಕ ಮಾಡಿಕೊಳ್ಳಲಾ ಗಿದ್ದರೂ, ಇಲ್ಲಿ ಹೆಚ್ಚಿನ ಕೆಲಸದ ಒತ್ತಡಗಳಿಲ್ಲದ ಕಾರಣ, ಬೇರೆ ಬೇರೆ ಇಲಾಖೆಗಳಿಗೆ ಹಲವರು ಡೆಪ್ಯೂಟ್ ಆದವರೋ ಇಲ್ಲವೇ ಒಒಡಿ ಮೇಲೆ ಬೇರೆ ಇಲಾಖೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇದರಿಂದ ಇಲಾಖೆಯಲ್ಲಿ ಕಡತ ವಿಲೇ ವಾರಿ ಸೇರಿದಂತೆ ಕಾರ್ಯಕ್ರಮಅನುಷ್ಟಾನ ಸಮರ್ಪಕವಾಗಿ ನಡೆಯುತ್ತಿಲ್ಲವೆಂದು ಇಲಾಖಾ ಪರಿಶೀಲನೆ ವೇಳೆ ಸಚಿವರಿಗೆ ಮನದಟ್ಟಾಗಿದೆ.

ಹೀಗಾಗಿ ಅವರನ್ನು ಪುನಃ ಸಹಕಾರ ಇಲಾಖೆಗೆ ವಾಪಸ್ ಕರೆಸಿಕೊಳ್ಳುವ ಪ್ರಕ್ರಿಯೆಗೆ ಸಚಿವರು ಚಾಲನೆ ನೀಡಿದ್ದಾರೆ. ಈ ವಿಚಾರವಾಗಿ ಕಳೆದ ವಾರ ಸೋಮಶೇಖರ್, ಸಿಎಂ ಗಮನಕ್ಕೆ ತಂದಿದ್ದರು, ಮುಖ್ಯಮಂತ್ರಿಗಳೂ ಕೂಡ ಕೂಡಲೇ ಕ್ರಮಕ್ಕೆ ಸೂಚಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

SCROLL FOR NEXT