ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಇಬ್ಬರ ಕೊಲೆ, ಆರೋಪಿ ಪೊಲೀಸ್ ವಶಕ್ಕೆ

ಕ್ಷುಲ್ಲಕ‌ ಕಾರಣಕ್ಕೆ ವ್ಯಕ್ತಿಯೋರ್ವ ಇಬ್ಬರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಜಯಪುರ ಹೋಬಳಿಯ ಕೋಟೆಹುಂಡಿ ಸಮೀಪ‌ ಭಾನುವಾರ ರಾತ್ರಿ ನಡೆದಿದೆ.

ಮೈಸೂರು: ಕ್ಷುಲ್ಲಕ‌ ಕಾರಣಕ್ಕೆ ವ್ಯಕ್ತಿಯೋರ್ವ ಇಬ್ಬರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಜಯಪುರ ಹೋಬಳಿಯ ಕೋಟೆಹುಂಡಿ ಸಮೀಪ‌ ಭಾನುವಾರ ರಾತ್ರಿ ನಡೆದಿದೆ.

ಯಡಹಳ್ಳಿ ಗ್ರಾಮದ ಟಿ.ಮಂಜುನಾಥ್ (33) ಹಾಗೂ ಆರ್.ಮಂಜುನಾಥ್ (35) ಕೊಲೆಯಾದವರು. 

ಕೋಟೆ ಹುಂಡಿಯ ನಿವಾಸಿ ಯೋಗೇಶ್(23) ಎಂಬಾತ ಇಬ್ಬರನ್ನು ಕೊಲೆ ಮಾಡಿದ್ದು, ಸೋಮವಾರ ನಸುಕಿನ ಜಾವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 

ರವಿವಾರ ರಾತ್ರಿ 8 ಗಂಟೆ ಸುಮಾರಿಗೆ ಕೋಟೆಹುಂಡಿ ಸಮೀಪದ ಮೈಸೂರು ಮಾನಂದವಾಡಿ ರಸ್ತೆಯಲ್ಲಿ ಸರಕು ಸಾಗಣೆ ಆಟೋ ಒಂದರಲ್ಲಿ ಟಿ.ಮಂಜುನಾಥ್, ಆರ್.ಮಂಜುನಾಥ್ ಹಾಗೂ ಮೂರ್ತಿ ಎಂಬುವವರು ಪ್ರಯಾಣಿಸುತ್ತಿದ್ದರು. ಈ ಸಮಯದಲ್ಲಿ ಆರೋಪಿ ಯೋಗೇಶ್ ಕೂಡ ಪ್ಯಾಸೆಂಜರ್ ಆಟೋದಲ್ಲಿ ಬರುತ್ತಿದ್ದನು. ಈ ಸಂದರ್ಭದಲ್ಲಿ ಎರಡೂ ವಾಹನಗಳೂ ಪರಸ್ಪರ ಉಜ್ಜಿಕೊಂಡು ಹೋಗಿವೆ. ಈ ವಿಚಾರಕ್ಕೆ ಗಲಾಟೆ ಆರಂಭವಾಗಿದ್ದು, ಮಾತಿಗೆ ಮಾತು ಬೆಳೆದು ಯೋಗೇಶ್ ಚಾಕುವಿನಿಂದ ಟಿ.ಮಂಜುನಾಥ್ ಹಾಗೂ ಆರ್.ಮಂಜುನಾಥ್ ಅವರಿಗೆ ಇರಿದು ಕೊಲೆ ಮಾಡಿದ್ದಾನೆ. ಹೇಗೋ ಮೂರ್ತಿ ಎಂಬುವವರು ತಪ್ಪಿಸಿಕೊಂಡು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.

ಘಟನೆಯಲ್ಲಿ ಟಿ.ಮಂಜುನಾಥ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರ್‌‌.ಮಂಜುನಾಥ್ ಅವರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸೋಮವಾರ ನಸುಕಿನಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

Epstein ties ಆರೋಪದ ಕುರಿತು ಮೌನ ಮುರಿದ ಬಿಲ್ ಗೇಟ್ಸ್; ಉದ್ಯಮಿ ಹೇಳಿದ್ದೇನು?

ಹಾರ್ನ್ ಮಾಡುವ ವಿಚಾರಕ್ಕೆ ಗಲಾಟೆ: 65ರ ವೃದ್ಧನ ಮೇಲೆ ಮನಸೋ ಇಚ್ಛೆ ಹಲ್ಲೆ, ರೌಡಿಶೀಟ್ ಗೆ ಪೊಲೀಸರ ಸಿದ್ಧತೆ? Video

Ranji Trophy final: ಕರ್ನಾಟಕದ ಕೆವಿ ಅನೀಶ್‌ಗೆ ಡಿಚ್ಚಿ ಹೊಡೆದ ಜಮ್ಮು ಮತ್ತು ಕಾಶ್ಮೀರದ ನಾಯಕ, Video

SCROLL FOR NEXT