ಸಂಗ್ರಹ ಚಿತ್ರ 
ರಾಜ್ಯ

ಸ್ವಚ್ಛತೆಗೆ ಆದ್ಯತೆ: ಪೊಲೀಸ್ ಠಾಣೆಯಲ್ಲೇ ವಾಷಿಂಗ್ ಮಿಷನ್

ಬೆಂಗಳೂರಿನಲ್ಲಿ ಪೊಲೀಸ್ ಪೇದೆಗೆ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಪೊಲೀಸರ ಸ್ವಚ್ಛತೆಗೆ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಇನ್ನಷ್ಟು ಆದ್ಯತೆ ಕೊಡಲು ಮುಂದಾಗಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ಪೊಲೀಸ್ ಪೇದೆಗೆ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಪೊಲೀಸರ ಸ್ವಚ್ಛತೆಗೆ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಇನ್ನಷ್ಟು ಆದ್ಯತೆ ಕೊಡಲು ಮುಂದಾಗಿದ್ದಾರೆ.

ಹೌದು, ಕೊರೊನಾ ವಾರಿಯರ್ಸ್ ಆಗಿ ದುಡಿಯುತ್ತಿರುವ ಪೊಲೀಸರು ಅಲ್ಲಲ್ಲಿ ಸುತ್ತಾಡುವುದು ಹೆಚ್ಚು. ಈಗಂತೂ ಕೊರೊನಾ ಸೇವೆ ಅಂತ ಇನ್ನಷ್ಟು ಓಡಾಟ. ಇಂತಹ ಸಂದರ್ಭದಲ್ಲಿ ಸ್ವಚ್ಛತೆಗೆ ಇನ್ನೂ ಹೆಚ್ಚು ಗಮನಕೊಡಬೇಕಾಗಿರುವುದು ಮುಖ್ಯ. ಹೀಗಾಗಿ ಪೊಲೀಸ್ ಠಾಣೆಗಳಿಗೆ ವಾಷಿಂಗ್ ಮಿಷನ್ ಅಳವಡಿಸಲು ಇಲಾಖೆ ಮುಂದಾಗಿದೆ.

ಠಾಣೆಯ ಸಿಬ್ಬಂದಿಗಳ ಸಮವಸ್ತ್ರ, ಖರ್ಚಿಫ್ ಸ್ವಚ್ಛತೆ ಸಲುವಾಗಿ ವಾಷಿಂಗ್ ಮಷಿನ್ ಕೊಡಲು ಚಿಂತನೆ ನಡೆಸಿದೆ.

ಪೊಲೀಸರ ಆರೋಗ್ಯದ ದೃಷ್ಟಿಯಿಂದ ಮತ್ತಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು,ಪ್ರಾಯೋಗಿಕವಾಗಿ ಎರಡು ಪೊಲೀಸ್ ಠಾಣೆಗೆ ವಾಷಿಂಗ್ ಮೆಷಿನ್ ನೀಡಲು ಚಿಂತನೆ ನಡೆಸಿದೆ ಎಂದು ಕಮೀಷನರ್ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಕರ್ತವ್ಯ ನಿರತ ಸಿಬ್ಬಂದಿ ಕರ್ತವ್ಯ ಮುಗಿದ ಬಳಿಕ ಮನೆಗೆ ಹೋಗುತ್ತಾರೆ‌. ಅದಕ್ಕಿಂತ ಠಾಣೆಯಲ್ಲಿ ಸಮವಸ್ತ್ರ ಸ್ವಚ್ಛತೆಕೊಳ್ಳಲೆಂದು, ಬಿಸಿನೀರಿನಲ್ಲಿ ಬಟ್ಟೆ ಸ್ವಚ್ಛತೆ ಮಾಡಲು ಬೇಕಾದ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಠಾಣೆಗಳಿಗೆ ವಾಷಿಂಗ್ ಮೆಷಿನ್ ಕೊಡಲು ಸಿದ್ಧತೆ ನಡೆಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT