ಕ್ವಾರಂಟೈನ್ ಸೀಲ್ 
ರಾಜ್ಯ

ಬೆಂಗಳೂರು: ಕ್ವಾರಂಟೈನ್‌ ಮುದ್ರೆ ಹಾಕಲ್ಪಟ್ಟ ವ್ಯಕ್ತಿಯ ಸ್ನೇಹಿತನಿಂದ ಮಹಿಳೆಯರ ಮೇಲೆ ಹಲ್ಲೆ

ಕ್ವಾರಂಟೈನ್‍ ಮುದ್ರೆ ಹಾಕಲ್ಪಟ್ಟ ವ್ಯಕ್ತಿಯೊಬ್ಬ ಬೀದಿಯಲ್ಲಿ ಮುಖಗವಸು ಧರಿಸದೇ ತಿರುಗುತ್ತಿದ್ದನ್ನು ಪ್ರಶ್ನಿಸಿದ ಮಹಿಳೆಯರ ಮೇಲೆ ಆತನ ಸ್ನೇಹಿತ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಾಣಾವರದಲ್ಲಿ ನಡೆದಿದೆ.

ಬೆಂಗಳೂರು: ಕ್ವಾರಂಟೈನ್‍ ಮುದ್ರೆ ಹಾಕಲ್ಪಟ್ಟ ವ್ಯಕ್ತಿಯೊಬ್ಬ ಬೀದಿಯಲ್ಲಿ ಮುಖಗವಸು ಧರಿಸದೇ ತಿರುಗುತ್ತಿದ್ದನ್ನು ಪ್ರಶ್ನಿಸಿದ ಮಹಿಳೆಯರ ಮೇಲೆ ಆತನ ಸ್ನೇಹಿತ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಾಣಾವರದಲ್ಲಿ ನಡೆದಿದೆ.

ಚಿಕ್ಕಬಾಣಾವರದ ಕೆಂಪಾಪುರ ಮುಖ್ಯರಸ್ತೆಯಲ್ಲಿ ಮುಖಗವಸು ಧರಿಸದೆ ಹೋಗುತ್ತಿದ್ದ ಕೈಮೇಲೆ ಕ್ವಾರಂಟೈನ್‌ ಮುದ್ರೆ ಹಾಕಲಾಗಿದ್ದ ವ್ಯಕ್ತಿಯೊಬ್ಬನನ್ನು ಗಮನಿಸಿದ ನಳಿನಿ ಹಾಗೂ ನೇತ್ರಾವತಿ ಎಂಬವರು ಪ್ರಶ್ನಿಸಿದಾಗ ಆತನ ಜೊತೆಗಿದ್ದ ಬಸವ ಎಂಬುವನು ಮಹಿಳೆಯರನ್ನು ನಿಂದಿಸಿ, ಹಲ್ಲೆ ನಡೆಸಿದ್ದಾನೆ ಎಂದು ಸೋಲದೇವನಹಳ್ಳಿ ಪೊಲೀಸರು ತಿಳಿಸಿದರು.

'ಮಹಿಳೆಯರು ಜೋರಾಗಿ ಕಿರುಚಿಕೊಂಡ ಕೂಡಲೇ ಆರೋಪಿ ಬಸವ ಮತ್ತು ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿ ಪರಾರಿಯಾಗಿದ್ದಾರೆ' ಎಂದು ಅವರು ತಿಳಿಸಿದ್ದಾರೆ. 

ಹತ್ತು ದಿನಗಳಿಂದ ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿ ಪರಾರಿಯಾಗಿರುವುದರಿಂದ ಗ್ರಾಮಸ್ಥರು ಭೀತಿಗೊಂಡಿದ್ದಾರೆ. ಆತನಲ್ಲಿ ಸೋಂಕು ಇರುವ ಬಗ್ಗೆ ಇನ್ನೂ ದೃಢಪಟ್ಟಿಲ್ಲ. ಒಂದೇ ವೇಳೆ ಇದ್ದರೆ ಅವನಿಂದ ಸೋಂಕು ಹರಡುತ್ತದೆ. ಪೊಲೀಸರು ಆದಷ್ಟು ಬೇಗ ಆರೋಪಿ ಮತ್ತು ಕ್ವಾರಂಟೈನ್ ವ್ಯಕ್ತಿಯನ್ನು ಬಂಧಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT