ಕ್ವಾರಂಟೈನ್ ಸೀಲ್ 
ರಾಜ್ಯ

ಬೆಂಗಳೂರು: ಕ್ವಾರಂಟೈನ್‌ ಮುದ್ರೆ ಹಾಕಲ್ಪಟ್ಟ ವ್ಯಕ್ತಿಯ ಸ್ನೇಹಿತನಿಂದ ಮಹಿಳೆಯರ ಮೇಲೆ ಹಲ್ಲೆ

ಕ್ವಾರಂಟೈನ್‍ ಮುದ್ರೆ ಹಾಕಲ್ಪಟ್ಟ ವ್ಯಕ್ತಿಯೊಬ್ಬ ಬೀದಿಯಲ್ಲಿ ಮುಖಗವಸು ಧರಿಸದೇ ತಿರುಗುತ್ತಿದ್ದನ್ನು ಪ್ರಶ್ನಿಸಿದ ಮಹಿಳೆಯರ ಮೇಲೆ ಆತನ ಸ್ನೇಹಿತ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಾಣಾವರದಲ್ಲಿ ನಡೆದಿದೆ.

ಬೆಂಗಳೂರು: ಕ್ವಾರಂಟೈನ್‍ ಮುದ್ರೆ ಹಾಕಲ್ಪಟ್ಟ ವ್ಯಕ್ತಿಯೊಬ್ಬ ಬೀದಿಯಲ್ಲಿ ಮುಖಗವಸು ಧರಿಸದೇ ತಿರುಗುತ್ತಿದ್ದನ್ನು ಪ್ರಶ್ನಿಸಿದ ಮಹಿಳೆಯರ ಮೇಲೆ ಆತನ ಸ್ನೇಹಿತ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಾಣಾವರದಲ್ಲಿ ನಡೆದಿದೆ.

ಚಿಕ್ಕಬಾಣಾವರದ ಕೆಂಪಾಪುರ ಮುಖ್ಯರಸ್ತೆಯಲ್ಲಿ ಮುಖಗವಸು ಧರಿಸದೆ ಹೋಗುತ್ತಿದ್ದ ಕೈಮೇಲೆ ಕ್ವಾರಂಟೈನ್‌ ಮುದ್ರೆ ಹಾಕಲಾಗಿದ್ದ ವ್ಯಕ್ತಿಯೊಬ್ಬನನ್ನು ಗಮನಿಸಿದ ನಳಿನಿ ಹಾಗೂ ನೇತ್ರಾವತಿ ಎಂಬವರು ಪ್ರಶ್ನಿಸಿದಾಗ ಆತನ ಜೊತೆಗಿದ್ದ ಬಸವ ಎಂಬುವನು ಮಹಿಳೆಯರನ್ನು ನಿಂದಿಸಿ, ಹಲ್ಲೆ ನಡೆಸಿದ್ದಾನೆ ಎಂದು ಸೋಲದೇವನಹಳ್ಳಿ ಪೊಲೀಸರು ತಿಳಿಸಿದರು.

'ಮಹಿಳೆಯರು ಜೋರಾಗಿ ಕಿರುಚಿಕೊಂಡ ಕೂಡಲೇ ಆರೋಪಿ ಬಸವ ಮತ್ತು ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿ ಪರಾರಿಯಾಗಿದ್ದಾರೆ' ಎಂದು ಅವರು ತಿಳಿಸಿದ್ದಾರೆ. 

ಹತ್ತು ದಿನಗಳಿಂದ ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿ ಪರಾರಿಯಾಗಿರುವುದರಿಂದ ಗ್ರಾಮಸ್ಥರು ಭೀತಿಗೊಂಡಿದ್ದಾರೆ. ಆತನಲ್ಲಿ ಸೋಂಕು ಇರುವ ಬಗ್ಗೆ ಇನ್ನೂ ದೃಢಪಟ್ಟಿಲ್ಲ. ಒಂದೇ ವೇಳೆ ಇದ್ದರೆ ಅವನಿಂದ ಸೋಂಕು ಹರಡುತ್ತದೆ. ಪೊಲೀಸರು ಆದಷ್ಟು ಬೇಗ ಆರೋಪಿ ಮತ್ತು ಕ್ವಾರಂಟೈನ್ ವ್ಯಕ್ತಿಯನ್ನು ಬಂಧಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT