ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಸೋಂಕು ನಿರ್ವಹಣೆಯಲ್ಲಿ ಬೆಂಗಳೂರು ಮಾದರಿ ನಗರ: ಕೇಂದ್ರ ಸರ್ಕಾರದಿಂದ ಸಿಕ್ಕಿತು ಪ್ರಶಂಸೆ

ಇಡೀ ದೇಶ ಕೊರೋನಾ ಸೋಂಕಿನ ಸಂಕಷ್ಟಕ್ಕೆ ಸಿಲುಕಿದ್ದರೆ ರಾಜಧಾನಿ ಬೆಂಗಳೂರು ಮತ್ತು ಇಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕೊರೋನಾ ಸೋಂಕಿನ ನಿರ್ವಹಣೆಯಲ್ಲಿ ಬೆಂಗಳೂರು ಮಾದರಿ ನಗರ ಎಂದು ಕೇಂದ್ರ ಸರ್ಕಾರ ಗುರುತಿಸಿದೆ.

ಬೆಂಗಳೂರು: ಇಡೀ ದೇಶ ಕೊರೋನಾ ಸೋಂಕಿನ ಸಂಕಷ್ಟಕ್ಕೆ ಸಿಲುಕಿದ್ದರೆ ರಾಜಧಾನಿ ಬೆಂಗಳೂರು ಮತ್ತು ಇಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕೊರೋನಾ ಸೋಂಕಿನ ನಿರ್ವಹಣೆಯಲ್ಲಿ ಬೆಂಗಳೂರು ಮಾದರಿ ನಗರ ಎಂದು ಕೇಂದ್ರ ಸರ್ಕಾರ ಗುರುತಿಸಿದೆ.

ಬೆಂಗಳೂರು ಈ ಕಿರೀಟವನ್ನು ಜೈಪುರ್, ಇಂದೋರ್ ಮತ್ತು ಚೆನ್ನೈ ನಗರಗಳೊಂದಿಗೆ ಹಂಚಿಕೊಂಡಿದೆ. ಸೋಂಕಿತರನ್ನು ಪತ್ತೆಹಚ್ಚುವಲ್ಲಿ ಬೆಂಗಳೂರು ಕೇರಳ ಮಾದರಿಯನ್ನು ಅನುಸರಿಸಿದರೆ ಕೇರಳದ ಯಾವ ನಗರ ಕೂಡ ಕೇಂದ್ರ ಸರ್ಕಾರದ ಪಟ್ಟಿಯಲ್ಲಿ ಇಲ್ಲದಿರುವುದು ವಿಶೇಷ.

ಇಲ್ಲಿ ತಂತ್ರಜ್ಞಾನವನ್ನು ಸಾಧ್ಯವಾದಷ್ಟು ಮಟ್ಟಿಗೆ ಬಳಸಿಕೊಂಡು ಕೊರೋನಾ ಸೋಂಕಿತರನ್ನು ನಿಭಾಯಿಸುವಲ್ಲಿ ಮತ್ತು ಅವರಿಗೆ ಚಿಕಿತ್ಸೆ ನೀಡುವಲ್ಲಿ ಯಶಸ್ಸು ಕಂಡಿದೆ. ಇಲ್ಲಿನ ಸರ್ಕಾರಿ ಅಧಿಕಾರಿಗಳು ಮುಂಬೈ, ಹೈದರಾಬಾದ್, ದೆಹಲಿ ಮತ್ತು ಅಹಮದಾಬಾದ್ ನಗರಗಳ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ.

ಬೆಂಗಳೂರಿನ ಬಗ್ಗೆ ಈ ಮಾಹಿತಿ ಸಿಕ್ಕಿದ್ದು ಆರೋಗ್ಯ ಇಲಾಖೆ ಸಚಿವ ಬಿ ಶ್ರೀರಾಮುಲು ಅವರಿಗೆ ನಿನ್ನೆ. ಬೆಂಗಳೂರು ನಗರದಲ್ಲಿ ನಿನ್ನೆಯವರೆಗೆ 274 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು 149 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. 9 ಸಾವು ಸಂಭವಿಸಿದೆ. ನಗರದಲ್ಲಿ 1.3 ಕೋಟಿ ಜನಸಂಖ್ಯೆಯಿದ್ದು ಬಿಬಿಎಂಪಿ 23 ಕಂಟೈನ್ ಮೆಂಟ್ ಪ್ರದೇಶಗಳನ್ನು ಗುರುತಿಸಿದೆ.

ಕೇಂದ್ರ ಸರ್ಕಾರದ ಪ್ರಶಂಸೆಗೆ ಕಾರಣವಾದ ಅಂಶಗಳು:
ಕಂಟೈನ್ ಮೆಂಟ್ ಪ್ರದೇಶಗಳನ್ನು ತಕ್ಷಣವೇ ಗುರುತಿಸಿ ಘೋಷಿಸಿ ಕ್ರಮ ಕೈಗೊಂಡಿದ್ದು
ಜ್ವರದ ಕ್ಲಿನಿಕ್ ಮತ್ತು ಕೋವಿಡ್-19 ಆಸ್ಪತ್ರೆಗಳನ್ನು ಸ್ಥಾಪಿಸಿದ್ದು.
ಸೋಂಕಿತರ ಪತ್ತೆಗೆ ತಂತ್ರಜ್ಞಾನ ಬಳಸಿ ಸ್ಥಳಕ್ಕೆ ಹೋಗುವ ಸಿಬ್ಬಂದಿಗಳ ಸದ್ಭಳಕೆ
ಉತ್ತಮ ಚಿಕಿತ್ಸೆಗೆ ವೈದ್ಯಕೀಯ ತಜ್ಞರ ತಂಡ ರಚನೆ
ಸೋಂಕಿತರ ಪತ್ತೆಗೆ ಕೇರಳ ಮಾದರಿ ಅನುಸರಿಸಿದ ಬೆಂಗಳೂರು

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕೊರೋನಾ ಸೋಂಕಿತರ ಸಂಖ್ಯೆ ಇಲ್ಲಿ ಅಧಿಕ ಪ್ರಮಾಣದಲ್ಲಿ ಹೆಚ್ಚಾಗಲಿಲ್ಲ, ಇದಕ್ಕೆ ನಗರದಲ್ಲಿ ಅಳವಡಿಸಿಕೊಂಡ ಕ್ರಮಗಳನ್ನು ಕೇಂದ್ರ ಸರ್ಕಾರ ಗುರುತಿಸಿ ಪ್ರಶಂಸೆ ವ್ಯಕ್ತಪಡಿಸಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT