ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾ ಶತಕ! ಸೋಂಕಿತರ ಸಂಖ್ಯೆ 2,282ಕ್ಕೆ ಏರಿಕೆ

ರಾಜ್ಯದಲ್ಲಿ ಇಂದು ಮಧ್ಯಾಹ್ನದವರೆಗೆ ಒಟ್ಟು ನೂರು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 2,282ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಇಂದು ಮಧ್ಯಾಹ್ನದವರೆಗೆ ಒಟ್ಟು ನೂರು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ, 2,282ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಸೋಮವಾರ ಸಂಜೆಯಿಂದ ಮಂಗಳವಾರ ಮಧ್ಯಾಹ್ನದವರೆಗೆ ಬರೋಬ್ಬರಿ 100 ಕೊರೋನಾ ಪ್ರಕರಣಗಳು ವರದಿಯಾಗಿವೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 2282ಕ್ಕೇರಿಕೆಯಾಗಿದೆ.

ಕೋಲಾರದಲ್ಲಿ 2, ಯಾದಗಿರಿ 14, ದಕ್ಷಿಣ ಕನ್ನಡದಲ್ಲಿ 3, ಬಾಗಲಕೋಟೆಯಲ್ಲಿ 1, ವಿಜಯಪುರದಲ್ಲಿ 5, ದಾವಣಗೆರೆಯಲ್ಲಿ 11, ಬೀದರ್ ನಲ್ಲಿ 10, ಹಾಸನ 13, ಉಡುಪಿ 3, ಚಿಕ್ಕಬಳ್ಳಾಪುರದಲ್ಲಿ 1, ಚಿತ್ರದುರ್ಗದಲ್ಲಿ 19, ಕೊಪ್ಫಳದಲ್ಲಿ1, ಬಳ್ಳಾರಿಯಲ್ಲಿ 1, ಬೆಂಗಳೂರು ನಗರ 2, ಬೆಳಗಾವಿ 11 ಪ್ರಕರಣಗಳು ವರದಿಯಾಗಿವೆ.

ಇವರಲ್ಲಿ ಬಹುತೇಕರು ಹೊರರಾಜ್ಯಗಳ ಪ್ರಯಾಣದ ಇತಿಹಾಸ ಹೊಂದಿದ್ದಾರೆ. ಮಹಾರಾಷ್ಟ್ರ, ತಮಿಳುನಾಡು ಮತ್ತು ಜಾರ್ಖಂಡ್ ಪ್ರವಾಸ ಕೈಗೊಂಡ ಹಲವರಲ್ಲಿ ಸೋಂಕು ಕಾಣಿಸಿಕೊಂಡಿದೆ. 

ಇಲ್ಲಿಯವರೆಗೆ ರಾಜ್ಯದಲ್ಲಿ 46 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಒಟ್ಟು 722 ಮಂದಿ ಗುಣಮುಖರಾಗಿದ್ದು, ಒಟ್ಟು 1514 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ