ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ತಾಯಿ-ಮಗಳು ಯತ್ನ

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಂತರ ತಾಯಿ-ಮಗಳು ಇಬ್ಬರೂ ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಂತರ ತಾಯಿ-ಮಗಳು ಇಬ್ಬರೂ ಕ್ವಾರಂಟೈನ್‌ನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.

ಈ ತಾಯಿ ಮಗಳು, ದೆಹಲಿಯಿಂದ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದು. ವಿಮಾನ ನಿಲ್ದಾಣದಲ್ಲಿ ಸಾಕಷ್ಟು ಬಿಗಿ ಭದ್ರತೆ ಒದಗಿಸಲಾಗಿದೆ. ಇದರ ನಡುವೆಯೇ ತಾಯಿ, ಮಗಳು ಪರಾರಿಯಾಗಲು ಯತ್ನಿಸಿ ಸಿಕ್ಕಿ ಬಿದ್ದಿದ್ದಾರೆ.

ಕ್ವಾರಂಟೈನ್ ನಿಂದ ತಪ್ಪಿಸಿಕೊಂಡು ಕಾರಿನಲ್ಲಿ ತಪ್ಪಿಸಿಕೊಳ್ಳಲು ತಾಯಿ, ಮಗಳು ಮುಂದಾಗಿದ್ದಾರೆ. ಅವರ ಕೈಯಲ್ಲಿ ರೆಡ್ ಝೊನ್ ಎಂಬ ಮುದ್ರೆ ಕೂಡ ಇತ್ತು. 

ದೇವನಹಳ್ಳಿ ವಿಮಾನ ನಿಲ್ದಾಣದಿಂದ ಕಾರಿನಲ್ಲಿ ಬೆಂಗಳೂರು ನಗರಕ್ಕೆ ಹೋಗಲು ಮುಂದಾಗಿದ್ದಾರೆ. ಸಿ ಎಸ್ ಸಿ ( ಸಾಮಾನ್ಯ ಸೇವಾ ಕೇಂದ್ರ) ತಂಡದಿಂದ ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

ಪೊಲೀಸರು ತಾಯಿ- ಮಗಳನ್ನು ತರಾಟೆಗೆ ತೆಗೆದುಕೊಂಡ ನಂತರ ಕ್ವಾರಂಟೈನ್ ಗೆ ಒಪ್ಪಿಗೆ ಸೂಚಿಸಿದ್ದಾರೆ. ಬಳಿಕ ಅವರನ್ನು ಕ್ವಾರಂಟೈನ್‌ಗೆ ಕಳುಹಿಸಲಾಗಿದೆ. ಅವರಿಬ್ಬರೂ ಕಾರಿನಲ್ಲಿ ಕುಳಿತಿದ್ದರಿಂದ ಕಾರಿಗೆ ರಾಸಾಯನಿಕ ಸಿಂಪಡಣೆ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ: ಮಕ್ಕಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು

SCROLL FOR NEXT