ಸಾಂದರ್ಭಿಕ ಚಿತ್ರ 
ರಾಜ್ಯ

ಐಎನ್‌ಎಸ್ ಸುಮೇಧಾದಲ್ಲಿ ದುರ್ಘಟನೆ: ನೌಕಾದಳದ ಸಿಬ್ಬಂದಿ ಸಾವು

ಭಾರತೀಯ ನೌಕಾಪಡೆಯ ಗಸ್ತು ಹಡಗು ‘ಐ.ಎನ್.ಎಸ್ ಸುಮೇಧಾ’ದ ಎಂಜಿನ್‌ನ ಫ್ಲೈವೀಲ್ ತುಂಡಾಗಿ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ನೌಕಾಪಡೆ ಸಿಬ್ಬಂದಿ ಮೃತಪಟ್ಟಿದ್ದಾರೆ.

ಕಾರವಾರ: ಭಾರತೀಯ ನೌಕಾಪಡೆಯ ಗಸ್ತು ಹಡಗು ‘ಐ.ಎನ್.ಎಸ್ ಸುಮೇಧಾ’ದ ಎಂಜಿನ್‌ನ ಫ್ಲೈವೀಲ್ ತುಂಡಾಗಿ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ನೌಕಾಪಡೆ ಸಿಬ್ಬಂದಿ ಮೃತಪಟ್ಟಿದ್ದಾರೆ.

ಹಡಗಿನ ಎಂಜಿನ್ ರೂಂ ಆರ್ಟಿಫೈಸರ್ ಆಗಿದ್ದ ಹರಿಯಾಣದ ಝಜ್ಜರ್‌ನ ಗೌರವ್ ದತ್ (27) ಮೃತರು. ಮೇ 19ರಂದು ಸಾಯಂಕಾಲ ಗಲ್ಫ್ ಆಫ್ ಏಡನ್‌ನಲ್ಲಿ ಅರಬ್ಬಿ ಸಮುದ್ರದಲ್ಲಿ ಐಎನ್‌ಎಸ್ ಸುಮೆಧಾ ಗಸ್ತು ನಡೆಸುತ್ತಿದ್ದಾಗ ನೌಕೆಯ ಮುಖ್ಯ ಇಂಜಿನ್‌ನ ನಿಯಂತ್ರಕ ಚಕ್ರದ ಬಳಿ ಕಾರ್ಯನಿರ್ವಹಿಸುತ್ತಿದ್ದಾಗ ಅದರ ರೆಕ್ಕೆಯ ಭಾಗ ಎದೆಗೆ ಬಡಿದು ಗೌರವ್ ಕೊನೆಯುಸಿರೆಳೆದಿದ್ದರು. ಈ ಪ್ರದೇಶವು ಕಾರವಾರದಿಂದ ಸುಮಾರು 1,535 ನಾಟಿಕಲ್ ಮೈಲು (3,000 ಕಿಲೋಮೀಟರ್) ದೂರದಲ್ಲಿದೆ.

ನಡು ಸಮುದ್ರದಲ್ಲಿ ಅವರು ಮೃತಪಟ್ಟಿದ್ದರಿಂದ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಾಗಿ ಬಂದಿದ್ದರ ಹಿನ್ನೆಲೆಯಲ್ಲಿ ಐಎನ್‌ಎಸ್ ಸುಮೇಧಾವನ್ನು ಗಲ್ಫ್ ಆಫ್ ಏಡನ್‌ನಿಂದ ಭಾರತಕ್ಕೆ ಹೊರಡಿಸಲಾಗಿತ್ತು. ಸುಮಾರು ಐದು ದಿನಗಳ ನಿರಂತರ ಪ್ರವಾಸದ ನಂತರ ಈ ನೌಕೆಯು ಮೊನ್ನೆ ಭಾನುವಾರ ಕಾರವಾರಕ್ಕೆ ತಲುಪಿತ್ತು. ಕಾರವಾರದ ಪೋಲಿಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡು, ಅಲ್ಲಿ ಪಂಚನಾಮೆ ಮತ್ತಿತರ ಅಗತ್ಯ ಪ್ರಕ್ರಿಯೆಗಳನ್ನು ಮುಗಿಸಿ ನಂತರ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಸಾಗಿಸಿದರು.

ನಿನ್ನೆ ಮೃತ ಅಧಿಕಾರಿಯ ಪಾರ್ಥಿವ ಶರೀರವನ್ನು ಹೆಲಿಕಾಪ್ಟರ್ ಮೂಲಕ ಹರಿಯಾಣಕ್ಕೆ ಕೊಂಡೊಯ್ಯಲಾಯಿತು. ಅವರ ಸ್ವಗ್ರಾಮದಲ್ಲಿ ಸಕಲ ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು. ಪ್ರಕರಣದ ಇಲಾಖಾ ತನಿಖೆಗೆ ಆದೇಶಿಸಲಾಗಿದೆ ಎಂದು ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT