ಮಹಾರಾಷ್ಟ್ರದಲ್ಲಿ ಮಿಡತೆ ಹಾವಳಿ: ಕರ್ನಾಟಕದಲ್ಲಿ ಕಟ್ಟೆಚ್ಚರ! 
ರಾಜ್ಯ

ಮಹಾರಾಷ್ಟ್ರದಲ್ಲಿ ಮಿಡತೆ ಹಾವಳಿ: ಕರ್ನಾಟಕದಲ್ಲಿ ಕಟ್ಟೆಚ್ಚರ! 

ಕೊರೋನಾ ನಿಭಾಯಿಸುವ ಒತ್ತಡ ಸಾಲದೆಂಬಂತೆ ಸರ್ಕಾರ, ಜನತೆಗೆ ಸಾಲು ಸಾಲು ಸವಾಲುಗಳು ಎದುರಾಗುತ್ತಿವೆ. 

ವಿಜಯಪುರ: ಕೊರೋನಾ ನಿಭಾಯಿಸುವ ಒತ್ತಡ ಸಾಲದೆಂಬಂತೆ ಸರ್ಕಾರ, ಜನತೆಗೆ ಸಾಲು ಸಾಲು ಸವಾಲುಗಳು ಎದುರಾಗುತ್ತಿವೆ. 

ಒಂದೆಡೆ ಕೊರೋನಾ ಕಾಟವಾದರೆ, ಮತ್ತೊಂದೆಡೆ ಉತ್ತರ ಭಾರತದ 5 ರಾಜ್ಯಗಳಲ್ಲಿ ಈಗಾಗಲೇ ತಲೆನೋವಾಗಿ ಪರಿಣಮಿಸಿರುವ ಮಿಡತೆಗಳ ಹಾವಳಿ ಮಹಾರಾಷ್ಟ್ರದ ಮೂಲಕ ರಾಜ್ಯಕ್ಕೂ ಕಾಡುವ ಆತಂಕ ಉಂಟಾಗಿದೆ. 

ಉತ್ತರ ಭಾರತದಲ್ಲಿ ಬೆಳೆಗಳನ್ನು ನಾಶ ಮಾಡಿ ಮಹಾರಾಷ್ಟ್ರದೆಡೆಗೆ ಧಾವಿಸಿರುವ ಮಿಡತೆಗಳು ಕರ್ನಾಟಕಕ್ಕೂ ಆಗಮಿಸುವ ಸಾಧ್ಯತೆಗಳಿವೆ. ಈಗಾಗಲೇ ಈಶಾನ್ಯ ಮಹಾರಾಷ್ಟ್ರದ ಜಿಲ್ಲೆಗಳಲ್ಲಿ ಇವುಗಳ ಹಾವಳಿ ಹೆಚ್ಚಾಗಿದ್ದು, ಕರ್ನಾಟಕದ ಗಡಿ ಜಿಲ್ಲೆಗಳ ರೈತರಿಗೆ ಈ ಕುರಿತು ಆತಂಕ ಉಂಟಾಗಿದೆ. ಈ ಬೆನ್ನಲ್ಲೇ ಕೃಷಿ ಹಾಗೂ ರೈತ ಸಚಿವಾಲಯ ಮಿಡತೆ ಹಾವಳಿಯನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ. 

ಈ ಮಿಡತೆಗಳು ಬೆಳೆದು ನಿಂತಿರುವ ಪೈರುಗಳನ್ನು ಎಲ್ಲಾ ರೀತಿಯ ಸಸ್ಯಗಳನ್ನು ತಿನ್ನುತ್ತವೆ. ಗಾಳಿ ಯಾವ ಕಡೆ ಬೀಸುತ್ತದೆಯೋ ಆ ಭಾಗಕ್ಕೆ ಹಾರುವ ಇವುಗಳು ದಿನವೊಂದಕ್ಕೆ 200 ಕಿ.ಮೀ ಸಾಗುವ ಸಾಮರ್ಥ್ಯ ಹೊಂದಿವೆ. ಎಲ್ಲಾ ರೀತಿಯ ಸಸ್ಯಗಳಿಗೂ ಹಾನಿಕಾರಕವಾಗಿವೆ. 

ಈ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿರುವ ಕೃಷಿ ಆಯುಕ್ತ ಬ್ರಿಜೇಶ್ ಕುಮಾರ್ ದೀಕ್ಷಿತ್, ಈ ಮಿಡತೆಗಳು ಗಾಳಿ ಬೀಸುವ ದಿಕ್ಕಿನಲ್ಲಿ ಹಾರಲಿವೆ. ಈಗ ಗಾಳು ಉತ್ತರಕ್ಕೆ ಬೀಸುತ್ತಿದೆ ಹಾಗಾಗಿ ರಾಜ್ಯಕ್ಕೆ ಇವುಗಳು ಆಗಮಿಸುವ ಸಾಧ್ಯತೆ ತುಂಬಾ ಕಡಿಮೆ. ಒಂದು ವೇಳೆ ಗಾಳಿ ದಕ್ಷಿಣ ಭಾಗಕ್ಕೆ ಬೀಸಿದರೆ, ಬೀದರ್ ಮೂಲಕ ರಾಜ್ಯಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಹಿರಿಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದ್ದಾರೆ. 

ಈಗ ಬೆಳಗೆಳಾವು ಇಲ್ಲದಿದ್ದರೂ ಸಸ್ಯ ಸಂಕುಲಕ್ಕೆ ಇವುಗಳಿಂದ ಅಪಾಯವಿದೆ ಎನ್ನುತ್ತಾರೆ ಬ್ರಿಜೇಶ್ ಕುಮಾರ್. ಇನ್ನು ವಿಪಕ್ಷ ಕಾಂಗ್ರೆಸ್ ನ ನಾಯಕ, ಮಾಜಿ ಗೃಹ ಸಚಿವ ಎಂಬಿ ಪಾಟೀಲ್ ಮಾತನಾಡಿ, ಈ ಮಿಡತೆ ಹಾವಳಿಯ ಬಗ್ಗೆ ಒಂದು ತಿಂಗಳ ಮುಂಚೆಯೇ ಅಧಿಕಾರಿಗಳಿಗೆ ಮಾಹಿತಿ ನೀಡಿ ಎಚ್ಚರಿಸಲಾಗಿತ್ತು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರಕ್ಕೆ ಯತ್ನಿಸಬೇಕೆಂದು ಮುಖ್ಯಮಂತ್ರಿಗಳು, ಕೃಷಿ ಸಚಿವರಿಗೆ ಪತ್ರ ಬರೆಯುವುದಾಗಿ ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT