ಕರಡಿ 
ರಾಜ್ಯ

ಚನ್ನಪಟ್ಟಣ: ವೃದ್ಧೆ ಮೇಲೆ ಕರಡಿ ದಾಳಿ

ಚನ್ನಪಟ್ಟಣ ನಗರದ ಸುಣ್ಣದ ಕೇರಿಯಲ್ಲಿ ಬೆಳ್ಳಂಬೆಳಗ್ಗೆ ಕರಡಿಯೊಂದು ಪ್ರತ್ಯಕ್ಷಗೊಂಡು ವೃದ್ಧೆಯ ಮೇಲೆ ದಾಳಿ ನಡೆಸಿದ ಘಟನೆ ಬುಧವಾರ ನಡೆದಿದೆ.

ರಾಮನಗರ: ಚನ್ನಪಟ್ಟಣ ನಗರದ ಸುಣ್ಣದ ಕೇರಿಯಲ್ಲಿ ಬೆಳ್ಳಂಬೆಳಗ್ಗೆ ಕರಡಿಯೊಂದು ಪ್ರತ್ಯಕ್ಷಗೊಂಡು ವೃದ್ಧೆಯ ಮೇಲೆ ದಾಳಿ ನಡೆಸಿದ ಘಟನೆ ಬುಧವಾರ ನಡೆದಿದೆ.

ನಗರಸಭೆಯ ಮಾಜಿ ಸದಸ್ಯೆ ಸಾಕಮ್ಮ (65) ಮೇಲೆ ಕರಡಿ ದಾಳಿ ನಡೆಸಿ ಅವರ ಮುಖಕ್ಕೆ ಪರಚಿದ್ದು,ಪರಿಣಾಮವಾಗಿ ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ಕೂಡಲೇ ಅವರ ರಕ್ಷಣೆಗೆ ದೌಡಾಯಿಸಿದ ಮಗ ಸುಧೀರ್ (40) ಅವರ ಮೇಲೂ ಕರಡಿ ದಾಳಿ ನಡೆಸಿ ಗಾಯಗೊಳಿಸಿದೆ.

ಸಾಕಮ್ಮ ಅವರು ಬೆಳಗ್ಗೆ ಮನೆಯಿಂದ ಹೊರಗೆ ಬಂದ ಸಂದರ್ಭದಲ್ಲಿ ಕಾಂಪೌಂಡ್ನಲ್ಲಿ ಅಡಗಿ ಕುಳಿತಿದ್ದ ಕರಡಿ ಏಕಾಏಕಿ ದಾಳಿ ನಡೆಸಿದೆ.

ಸದ್ಯ ಸಾಕಮ್ಮ ಅವರನ್ನು ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಮಹಮ್ಮದ್ ಮನ್ಸೂರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT