ತಿರುಪತಿ ದೇವಾಲಯ 
ರಾಜ್ಯ

ತಿರುಪತಿ ದೇವಸ್ಥಾನದ ಆಸ್ತಿ ಮಾರಾಟ: ಸರ್ಕಾರೇತರ ಸಮಿತಿ ರಚಿಸಲು ಶ್ರೀರಾಮಸೇನೆ ಆಗ್ರಹ

ಬೆಂಗಳೂರು: ತಿರುಪತಿ ದೇವಸ್ಥಾನದ ಆಸ್ತಿ ಮಾರಾಟ ಮಾಡುವ ನಿರ್ಧಾರಕ್ಕೆ ತಡೆಯಾಜ್ಞೆ ನೀಡಿ ಭಕ್ತರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿರುವ ಆಂಧ್ರಪ್ರದೇಶ ಸರ್ಕಾರದ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ, ಆಸ್ತಿ ಮಾರಾಟಕ್ಕಾಗಿ ಸಾಧುಸಂತರು, ಭಕ್ತರು, ವಿದ್ವಾಂಸರ ಸರ್ಕಾರೇತರ ಸಮಿತಿ ರಚಿಸಲು ಆಗ್ರಹಿಸುವಂತೆ ಆಂಧ್ರಪ್ರದೇಶ ರಾಜ್ಯಪಾಲರಿಗೆ ಮನವಿ...

ಬೆಂಗಳೂರು: ತಿರುಪತಿ ದೇವಸ್ಥಾನದ ಆಸ್ತಿ ಮಾರಾಟ ಮಾಡುವ ನಿರ್ಧಾರಕ್ಕೆ ತಡೆಯಾಜ್ಞೆ ನೀಡಿ ಭಕ್ತರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿರುವ ಆಂಧ್ರಪ್ರದೇಶ ಸರ್ಕಾರದ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ, ಆಸ್ತಿ ಮಾರಾಟಕ್ಕಾಗಿ ಸಾಧುಸಂತರು, ಭಕ್ತರು, ವಿದ್ವಾಂಸರ ಸರ್ಕಾರೇತರ ಸಮಿತಿ ರಚಿಸಲು ಆಗ್ರಹಿಸುವಂತೆ ಆಂಧ್ರಪ್ರದೇಶ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.

ಆಂಧ್ರಪ್ರದೇಶ ಸರ್ಕಾರದ ಅಧೀನದಲ್ಲಿರುವ, ಟಿಟಿಡಿ ಮಂಡಳಿ ಆಸ್ತಿ ಮಾರಾಟಕ್ಕೆ ಮುಂದಾಗಿದೆ. ದೇವಸ್ಥಾನದ ಭಕ್ತರು ದಾನ ನೀಡಿದ್ದ ಐವತ್ತಕ್ಕೂ ಹೆಚ್ಚು ಆಸ್ತಿಗಳನ್ನು ಮಾರಾಟ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲು ಮುಂದಾಗಿದೆ. 
ಇದೊಂದು ಹೇಯ ನಡೆಯಾಗಿದ್ದು, ಇಡೀ ಭಕ್ತ ಸಮೂಹ, ಹಿಂದೂ ಧರ್ಮಕ್ಕೆ ಮಾಡುವ ದ್ರೋಹವಾಗಿದೆ ಎಂದು ಬೆಂಗಳೂರು ಶ್ರೀರಾಮ ಸೇನೆ ಘಟಕ ತನ್ನ ಮನವಿ ಪತ್ರದಲ್ಲಿ ಆರೋಪಿಸಿದೆ.

ಆಸ್ತಿ ಮಾರಾಟಕ್ಕೆ ಮುಂದಾದ ಬೆಳವಣಿಗೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ಭಕ್ತರ, ಸಾಧುಸಂತರ, ಹಿಂದೂ ಸಂಘಟನೆಗಳ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿರುವುದು ಉತ್ತಮ ಬೆಳವಣಿಗೆ. ಆದರೆ ಆಸ್ತಿ ಮಾರಾಟಕ್ಕೆ ರಾಜ್ಯಪಾಲರ ನೇತೃತ್ವದಲ್ಲಿ ಸರ್ಕಾರೇತರ ಸಮಿತಿ ರಚಿಸಬೇಕು. ಆಂಧ್ರ ಪ್ರದೇಶದ ರಾಜ್ಯಪಾಲರು ಮಧ್ಯೆ ಪ್ರವೇಶಿಸಿ ರಾಜ್ಯ ಸಕಾರಕ್ಕೆ ಸೂಚನೆ ನೀಡಬೇಕು. ಸರ್ಕಾರದ ಕಾನೂನು ಬಾಹಿರ , ಸಂವಿಧಾನ ವಿರೋಧಿ ನೀತಿಯನ್ನು ತಡೆ ಹಿಡಿಯುವಂತೆ ಶ್ರೀರಾಮಸೇನೆ ಆಗ್ರಹಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂತಾರಾ ಅಪಹಾಸ್ಯ ಪ್ರಕರಣ: 'ಸೂಪರ್ ಸ್ಟಾರ್ ಆದ್ರೇನು.. ನಾಲಿಗೆ ಮೇಲೆ ಹಿಡಿತ ಇರ್ಬೇಕು..': ನಟ ರಣವೀರ್ ಸಿಂಗ್ ಹೈಕೋರ್ಟ್ ಚಾಟಿ!

ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆಗೆ ಸ್ವಪಕ್ಷದಲ್ಲೇ ತೀವ್ರ ವಿರೋಧ: ಆದರೆ ದೇಶದ ಹಿತಕ್ಕಾಗಿ ಇದು ಒಳ್ಳೆಯದ್ದು ಎಂದ ಖರ್ಗೆ

ಪಶ್ಚಿಮ ಬಂಗಾಳ SIR ಪರಿಶೀಲನೆ: ಜಾರ್ಖಂಡ್-ಒಡಿಶಾ ನ್ಯಾಯಾಧೀಶರ ನಿಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ

ಜಾರ್ಖಂಡ್ ಏರ್ ಆಂಬುಲೆನ್ಸ್ ದುರಂತ: ಮೃತಪಟ್ಟ ಎಲ್ಲಾ ಏಳು ಮಂದಿ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ-Video

ಸಾಮೂಹಿಕ ಅತ್ಯಾಚಾರ: ಕೊನೆಗೂ ಮೌನ ಮುರಿದ ಸಂತ್ರಸ್ಥೆ, 'ನ್ಯಾಯಬೇಕು.. ನನ್ನಂತೆಯೇ ಸಾಕಷ್ಟು ಯುವತಿಯರಿಗೆ ದೌರ್ಜನ್ಯ'

SCROLL FOR NEXT