ಸಂಗ್ರಹ ಚಿತ್ರ 
ರಾಜ್ಯ

ಆಸ್ಪತ್ರೆಯಿಂದ ಡಿಸ್ಚಾರ್ಜ್'ಗೂ ಮುನ್ನ ಕೊರೋನಾ ಪರೀಕ್ಷೆ ಕಡ್ಡಾಯ: ಹೊಸ ಡಿಸ್ಚಾರ್ಜ್ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

ಕೊರೋನಾ ಸೋಂಕಿತರಿಗೆ ಪರಿಷ್ಕೃತ ಡಿಸ್ಚಾರ್ಜ್ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಮಂಗಳವಾರ ಬಿಡುಗೆಡ ಮಾಡಿದೆ. 

ನವದೆಹಲಿ: ಕೊರೋನಾ ಸೋಂಕಿತರಿಗೆ ಪರಿಷ್ಕೃತ ಡಿಸ್ಚಾರ್ಜ್ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಮಂಗಳವಾರ ಬಿಡುಗೆಡ ಮಾಡಿದೆ. 

ಮಾರ್ಗಸೂಚಿಗಳಲ್ಲಿರುವ ಕೆಲವು ಅಂಶಗಳು ಇಂತಿವೆ...

  • ಆಸ್ಪತ್ರೆಯಿಂದ ಬಿಡುಗಡೆಗೊಳ್ಳುವುದಕ್ಕೂ ಮುನ್ನ 3 ದಿನಗಳ ಯಾವುದೇ ರೀತಿಯ ಜ್ವರ ಹಾಗೂ ಸೋಂಕಿನ ಲಕ್ಷಣಗಳು ಕಾಣಬಾರದು. 
  • ಪ್ರತೀ ದಿನ ರೋಗಿಯ ದೇಹದ ತಾಪಮಾನ, ನಾಡಿ ಮಿಡಿತವನ್ನು ಪರೀಕ್ಷೆ ಮಾಡಬೇಕು. 
  • ಯಾವುದೇ ಲಕ್ಷಣಗಳು ಗೋಚರಿಸದೆ ಇದ್ದಲ್ಲಿ 10 ದಿನಗಳ ಬಳಿಕ ಡಿಸ್ಚಾರ್ಜ್ ಮಾಡಬಹುದಾಗಿದೆ. 
  • ಎಲ್ಲಾ ಕೊರೋನಾ ಸೋಂಕಿತರು, ಚಿಕಿತ್ಸೆಗಾಗಿಯೇ ಮೀಸಲಟ್ಟಿರುವ ಆಸ್ಪತ್ರೆಗಳಲ್ಲಿಯೇ ಚಿಕಿತ್ಸೆ ಪಡೆಯಬೇಕು. 
  • ಯಾವುದೇ ಸರ್ಕಾರಿ ಅಥವಾ ಖಾಸಗಿ ಕೊರೋನಾ ಹೆಲ್ತ್ ಕೇರ್ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಬಹುದಾಗಿದೆ. 
  • ಬಿಡುಗಡೆ ಮಾಡುವ ನಾಲ್ಕು ದಿನಗಳ ಹಿಂದಿನಿಂದ ಕೃತಕ ಆಮ್ಲಜನಕದ ಸಪೋರ್ಟ್ ಇರಬಾರದು. 
  • ಕೊರೋನಾ ಲಕ್ಷಣಗಳು ಕಂಡು ಬರದಿದ್ದರೆ, ಮೂರು ದಿನಗಳ ಬಳಿಕ ಆರ್'ಟಿ ಹಾಗೂ ಪಿಸಿಆರ್ ಪರೀಕ್ಷೆ ನಡೆಸಬೇಕು. ರಿಪೋರ್ಟ್ ನಲ್ಲಿ ನೆಗೆಟಿವ್ ಎಂದು ಬಂದರೆ ಮಾತ್ರ ಅವನ್ನು ಬಿಡುಗಡೆ ಮಾಡಲಾಗುತ್ತದೆ. 
  • ಆಸ್ಪತ್ರೆಯಲ್ಲಿರುವಾಗ ಯಾವುದೇ ಲಕ್ಷಣಗಳಿಲ್ಲದಿದ್ದರೂ ಕೊರೋನಾ ಪಾಸಿಟಿವ್ ಇದ್ದರೆ ಅವರಿಗೆ ಆರ್'ಟಿ ಪಿಸಿಆರ್ ಟೆಸ್ಟ್ ಮಾಡಿಸಬೇಕು. ಒಮ್ಮೆ ವರದಿಯಲ್ಲಿ ನೆಗೆಟಿವ್ ಬಂದರೂ ಕೂಡ ವಾರದ ಬಳಿಕ ಮತ್ತೊಮ್ಮೆ ಪರೀಕ್ಷೆ ನಡೆಸಬೇಕು. 
  • ಆಸ್ಪತ್ರೆಯಿಂದ ಬಿಡುಗಡೆಯಾದ ಸೋಂಕಿತರಿಗೆ 14 ದಿನಗಳ ಕಾಲ ಹೋಂ ಕ್ವಾರಂಟೈನ್ ವಿಧಿಸಲಾಗುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT