ಸಾಂದರ್ಭಿಕ ಚಿತ್ರ 
ರಾಜ್ಯ

ನಾಗರಹೊಳೆ ರಾಷ್ಟ್ರೀಯ ಉದ್ಯಾನ: ಬುಡಕಟ್ಟು ಜನಾಂಗದವರನ್ನು ಕೊಂದಿದ್ದ ಹುಲಿ ಸೆರೆ

ಜೇನು ಕುರುಬ ಸಮುದಾಯಕ್ಕೆ ಸೇರಿದ ಬುಡಕಟ್ಟು ಜನಾಂಗದವರನ್ನು ಕೊಂದ ಹುಲಿಯನ್ನು ಮಂಗಳವಾರ ತಡರಾತ್ರಿ ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಸೆರೆಹಿಡಿಯಲಾಗಿದೆ. 

ಮೈಸೂರು: ಜೇನು ಕುರುಬ ಸಮುದಾಯಕ್ಕೆ ಸೇರಿದ ಬುಡಕಟ್ಟು ಜನಾಂಗದವರನ್ನು ಕೊಂದ ಹುಲಿಯನ್ನು ಮಂಗಳವಾರ ತಡರಾತ್ರಿ ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಸೆರೆಹಿಡಿಯಲಾಗಿದೆ. 

ಈ ಕಾರ್ಯಾಚರಣೆಯಿಂದ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ನೇರಳಕುಪ್ಪೆ ಕುಗ್ರಾಮದ ಸುತ್ತಮುತ್ತಲಿನ ಜನರು ನೆಮ್ಮದಿಯ ನಿಟ್ಟುಸಿರಿಟ್ಟಿದ್ದಾರೆ.

ಕಾರ್ಯಾಚರಣೆಯಲ್ಲಿ ಹುಲಿಯು ಬುಡಕಟ್ಟು ಜನಾಂಗದವನನ್ನು ಕೊಂದ ಸ್ಥಳದಲ್ಲಿ ಪಂಜರವನ್ನು ಇರಿಸಿ, ಅದನ್ನು ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಸಿಕ್ಕಿಬಿದ್ದ ಹುಲಿಯನ್ನು ನಗರದ ಹೊರವಲಯದಲ್ಲಿರುವ ಚಾಮುಂಡಿ ಪ್ರಾಣಿ ಪಾರುಗಾಣಿಕಾ ಕೇಂದ್ರಕ್ಕೆ ಸ್ಥಳಾಂತರಿಸಿದ್ದು, ಆರೋಗ್ಯ ಸ್ಥಿತಿಯನ್ನು ಪರೀಕ್ಷಿಸಲಾಗುತ್ತಿದೆ.

ಕಳೆದ 10 ದಿನಗಳಲ್ಲಿ ಬಂಡೀಪುರ-ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಸಿಕ್ಕಿಬಿದ್ದ ಮೂರನೇ ಹುಲಿ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಾರತಕ್ಕೆ ಸೇವೆ ನೀಡಲು ಸ್ಟಾರ್‌ಲಿಂಕ್ ಸಿದ್ಧ, ಗ್ರಾಮೀಣ ಸಂಪರ್ಕಕ್ಕೆ ಸಹಾಯ ಮಾಡುತ್ತದೆ': Elon Musk

ತಮಿಳುನಾಡು: ಸರ್ಕಾರಿ ಬಸ್‌ಗಳ ಮುಖಾಮುಖಿ ಡಿಕ್ಕಿ; ಕನಿಷ್ಠ 11 ಮಂದಿ ಸಾವು, 20 ಜನರಿಗೆ ಗಾಯ!

ಮೊದಲ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ಅಬ್ಬರದ ಬ್ಯಾಟಿಂಗ್: ಕೊನೆಯ ಓವರ್ ನಲ್ಲಿ ಭಾರತಕ್ಕೆ ವಿರೋಚಿತ ಜಯ!

'ಆ ಹಸಿವು ಇನ್ನೂ ಇದೆ.. ನಾನು ಉತ್ತಮ ಸ್ಥಿತಿಯಲ್ಲಿದ್ದೇನೆ': Virat kohli ಖಡಕ್ ಸಂದೇಶ! ಟೆಸ್ಟ್ ಕ್ರಿಕೆಟ್ ಗೆ ಕೊಹ್ಲಿ ವಾಪಸ್?

Cricket: ಕೇವಲ 11 ರನ್ ಗೆ 3 ವಿಕೆಟ್; ಗೆಲುವಿನ ಸನಿಹ ಬಂದಿದ್ದ ದಕ್ಷಿಣ ಆಫ್ರಿಕಾ ಸೋಲಿನಲ್ಲೂ ದಾಖಲೆಗಳ ಸುರಿಮಳೆ!

SCROLL FOR NEXT