ಸಾಂದರ್ಭಿಕ ಚಿತ್ರ 
ರಾಜ್ಯ

ಜೈ ಶ್ರೀರಾಮ್ ಹೇಳುವಂತೆ ಹಲ್ಲೆ: ಬಜರಂಗದಳದ ಮುಖಂಡ ಸೇರಿ ನಾಲ್ವರ ವಿರುದ್ಧ ಎಫ್ ಐಆರ್ 

ಬಾಲಕನೊಬ್ಬನಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿ ಬಜರಂಗದಳದ ಮುಖಂಡ ಸಹಿತ ನಾಲ್ವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಬಾಲಕನೊಬ್ಬನಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿ ಬಜರಂಗದಳದ ಮುಖಂಡ ಸಹಿತ ನಾಲ್ವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ಯಾನ ನಿವಾಸಿ, ಭಜರಂಗದಳದ ಮುಖಂಡ ದಿನೇಶ್ ಹಾಗೂ ಕೊಳ್ನಾಡು ಗ್ರಾಮದ 16 ವರ್ಷ ಪ್ರಾಯದ ಇಬ್ಬರು ಮತ್ತು ಕನ್ಯಾನ ಗ್ರಾಮದ 17 ವರ್ಷ ಪ್ರಾಯದ ಓರ್ವ ಹಲ್ಲೆ ನಡೆಸಿರುವ ಆರೋಪಿಗಳು.

ಏಪ್ರಿಲ್ 21ರಂದು 11 ಗಂಟೆ ಸುಮಾರಿಗೆ ನಾಲ್ವರು ಆರೋಪಿಗಳು ಬಾಲಕನನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿರುವುದಲ್ಲದೆ ಮೋಟಾರು ಸೈಕಲಿನಲ್ಲಿ ಕುಳ್ಳಿರಿಸಿ ಕಾಡುಮಠ ಪ್ರೌಢ ಶಾಲೆಯ ಮೈದಾನಕ್ಕೆ ಕರೆದುಕೊಂದು ಹೋಗಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ.

ಅಲ್ಲದೆ ಜೈ ಶ್ರೀರಾಮ್ ಹೇಳುವಂತೆ ಬಲವಂತ ಪಡಿಸಿರುವುದಲ್ಲದೆ ಬಾಲಕನ ಬಳಿ ಇದ್ದ ಹಣವನ್ನು ದೋಚಿದ್ದಾರೆ ಎಂದು ಬಾಲಕ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT