ಸಾಂದರ್ಭಿಕ ಚಿತ್ರ 
ರಾಜ್ಯ

ಜೈ ಶ್ರೀರಾಮ್ ಹೇಳುವಂತೆ ಹಲ್ಲೆ: ಬಜರಂಗದಳದ ಮುಖಂಡ ಸೇರಿ ನಾಲ್ವರ ವಿರುದ್ಧ ಎಫ್ ಐಆರ್ 

ಬಾಲಕನೊಬ್ಬನಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿ ಬಜರಂಗದಳದ ಮುಖಂಡ ಸಹಿತ ನಾಲ್ವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಬಾಲಕನೊಬ್ಬನಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿ ಬಜರಂಗದಳದ ಮುಖಂಡ ಸಹಿತ ನಾಲ್ವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ಯಾನ ನಿವಾಸಿ, ಭಜರಂಗದಳದ ಮುಖಂಡ ದಿನೇಶ್ ಹಾಗೂ ಕೊಳ್ನಾಡು ಗ್ರಾಮದ 16 ವರ್ಷ ಪ್ರಾಯದ ಇಬ್ಬರು ಮತ್ತು ಕನ್ಯಾನ ಗ್ರಾಮದ 17 ವರ್ಷ ಪ್ರಾಯದ ಓರ್ವ ಹಲ್ಲೆ ನಡೆಸಿರುವ ಆರೋಪಿಗಳು.

ಏಪ್ರಿಲ್ 21ರಂದು 11 ಗಂಟೆ ಸುಮಾರಿಗೆ ನಾಲ್ವರು ಆರೋಪಿಗಳು ಬಾಲಕನನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿರುವುದಲ್ಲದೆ ಮೋಟಾರು ಸೈಕಲಿನಲ್ಲಿ ಕುಳ್ಳಿರಿಸಿ ಕಾಡುಮಠ ಪ್ರೌಢ ಶಾಲೆಯ ಮೈದಾನಕ್ಕೆ ಕರೆದುಕೊಂದು ಹೋಗಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ.

ಅಲ್ಲದೆ ಜೈ ಶ್ರೀರಾಮ್ ಹೇಳುವಂತೆ ಬಲವಂತ ಪಡಿಸಿರುವುದಲ್ಲದೆ ಬಾಲಕನ ಬಳಿ ಇದ್ದ ಹಣವನ್ನು ದೋಚಿದ್ದಾರೆ ಎಂದು ಬಾಲಕ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT