ಸಚಿವ ನಾರಾಯಣ ಗೌಡ 
ರಾಜ್ಯ

ಮಾವಿನ ಹಣ್ಣಿನಲ್ಲಿ ಕೊರೋನಾ ಸೋಂಕು ಬರುವುದಿಲ್ಲ: ಸಚಿವ ನಾರಾಯಣಗೌಡ ಸ್ಪಷ್ಟನೆ

ಮಾವಿನ ಹಣ್ಣಿನಿಂದ ಕೊರೊನಾ ಬರುವುದಿಲ್ಲ. ಮಾವಿನ ಹಣ್ಣು ತಿನ್ನುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದು ತೋಟಗಾರಿಕಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

ಬೆಂಗಳೂರು:  ಮಾವಿನ ಹಣ್ಣಿನಿಂದ ಕೊರೊನಾ ಬರುವುದಿಲ್ಲ. ಮಾವಿನ ಹಣ್ಣು ತಿನ್ನುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದು ತೋಟಗಾರಿಕಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

ನಿನ್ನೆ ಮಂಡ್ಯದಲ್ಲಿ ತಾವು ಆಡಿದ್ದ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ. ಕೆ ಆರ್ ಪೇಟೆ ತಾಲೂಕಿನ ಮರುವನಹಳ್ಳಿಯನ್ನು ಸೀಲ್‌ ಡೌನ್‌ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಸುಮಾರು 14 ಜನ ಸೇರಿ ಅಲ್ಲಿ ಸಭೆ ಮಾಡಿದ್ದರು. ಈ ವೇಳೆ ಮಾವಿನ ಹಣ್ಣನ್ನು ಕಟ್ ಮಾಡಿ ಹಂಚಿಕೊಂಡು ತಿಂದಿದ್ದರು. ಇದರಿಂದಾಗಿ ಅವರೆಲ್ಲರಿಗು ಪರಸ್ಪರ ಸೋಂಕು ಹರಡಿರಬಹುದು ಎಂದೂ, ಅವರನ್ನು ಕ್ವಾರಂಟೈನ್ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದೆ. ಮಾವಿನ ಹಣ್ಣಿನಿಂದ ಕೊರೋನಾ ಬರಲ್ಲ. ನಿನ್ನೆ ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಚಿವ ನಾರಾಯಣಗೌಡ ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT