ರಾಜ್ಯ

ರಾಜ್ಯದ ಎಲ್ಲಾ ನದಿಗಳ ಸಮಸ್ಯೆ ಶೀಘ್ರ ಪರಿಹಾರ: ರಮೇಶ್ ಜಾರಕಿಹೊಳಿ

Nagaraja AB

ಮೈಸೂರು: ರಾಜ್ಯದ ಎಲ್ಲಾ ನದಿಗಳ ಸಮಸ್ಯೆಗಳನ್ನು  ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಸರಿಪಡಿಸುತ್ತೇವೆ. ರೈತರಿಗೆ ಕುಡಿಯಲು ಹಾಗೂ ಕೃಷಿಗೆ ನೀರು ಪೂರೈಸುವಂತಹ ಕೆಲಸವನ್ನು ಮಾಡುತ್ತೇವೆ ಎಂದು ಜಲ  ಸಂಪನ್ಮೂಲ ಸಚಿವ ರಮೇಶ್  ಜಾರಕಿಹೊಳಿ ತಿಳಿಸಿದ್ದಾರೆ.

ಗುರುವಾರ ಎಚ್.ಡಿ ಕೋಟೆ ಕಬಿನಿ ಜಲಾಶಯ ಪರಿವೀಕ್ಷಣೆ ಸಂದರ್ಭದಲ್ಲಿ ಮಾತನಾಡಿದ  ಅವರು,  ಕೇಂದ್ರ ಸರ್ಕಾರ ಸಂಕಷ್ಟದ ಕಾಲದಲ್ಲಿ ಅತ್ಯುತ್ತಮವಾದ ಆರ್ಥಿಕ ಪ್ಯಾಕೇಜ್  ಘೋಷಿಸಿದೆ. ಅದರಲ್ಲಿ ಜಲ ಸಂಪನ್ಮೂಲ ಇಲಾಖೆಗೆ ಎಷ್ಟು ಸಿಗುತ್ತದೆ ಎಂಬುದು ಶೀಘ್ರದಲ್ಲೇ  ತಿಳಿಯಲಿದೆ ಎಂದು ಮಾಹಿತಿ ನೀಡಿದರು.

ಇಲಾಖೆವಾರು ಎಲ್ಲಾ  ಜಲಾಶಯಗಳನ್ನು ವೀಕ್ಷಣೆ ಮಾಡಿದ್ದೇನೆ. ಕೃಷಿಗೆ ನೀರು ಹರಿಸುವ ವಿಚಾರ ಸಂಬಂಧ ಈಗಾಗಲೇ  ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆದಿದ್ದು, ರಾಜ್ಯದ ಜಲಾಶಯಗಳ ಸ್ಥಿತಿಗತಿ ಗಮನಿಸಿ  ತೀರ್ಮಾನ ಕೈಗೊಳ್ಳಲಾಗುವುದು. ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ನೀರಾವರಿ ಇಲಾಖೆ  ಅಧಿಕಾರಿಗಳೊಂದಿಗೆ ಚರ್ಚಿಸಿ ಅಲ್ಲಿನ ಲೋಪದೋಷಗಳನ್ನು ಬಗೆಹರಿಸುತ್ತೇನೆ  ಎಂದು  ಹೇಳಿದರು.

SCROLL FOR NEXT