ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಪರಿಶೀಲನೆ 
ರಾಜ್ಯ

ಬೆಂಗಳೂರಿನಲ್ಲಿ ವರುಣನ ಅವಾಂತರ, ಹಲವೆಡೆ ಧರೆಗುರುಳಿದ ಮರಗಳು!

ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಸಂಜೆಯಿಂದ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆ ಹಲವೆಡೆ ಸಾಕಷ್ಟು ಅವಾಂತರಕ್ಕೆ ಕಾರಣವಾಗಿದೆ. ಭಾರೀ ಮಳೆಯಿಂದಾಗಿ ಅನೇಕ ಕಡೆಗಳಲ್ಲಿ ಮರಗಳು ಧರೆಗುರುಳಿ ಬಿದಿದ್ದು, ವಾಹನ ಸವಾರರು ತೀವ್ರ ಪರದಾಡುವಂತಾಯಿತು.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಸಂಜೆಯಿಂದ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆ ಹಲವೆಡೆ ಸಾಕಷ್ಟು ಅವಾಂತರಕ್ಕೆ ಕಾರಣವಾಗಿದೆ. ಭಾರೀ ಮಳೆಯಿಂದಾಗಿ ಅನೇಕ ಕಡೆಗಳಲ್ಲಿ ಮರಗಳು ಧರೆಗುರುಳಿ ಬಿದಿದ್ದು, ವಾಹನ ಸವಾರರು ತೀವ್ರ ಪರದಾಡುವಂತಾಯಿತು.

ಅರಮನೆ ಮೈದಾನ, ಗುಟ್ಟಹಳ್ಳಿ, ಪ್ಯಾಲೇಶ್ ರಸ್ತೆ, ಕಾವೇರಿ ಜಂಕ್ಷನ್, ಸಂಪಿಗೆ ರಸ್ತೆ ಮತ್ತಿತರ ಹಲವು ಕಡೆಗಳಲ್ಲಿ ಸುಮಾರು 15ಕ್ಕೂ ಹೆಚ್ಚು ಮರಗಳು ನೆಲಕ್ಕೆ ಉರುಳಿ ಬಿದಿದ್ದು, ಇವುಗಳನ್ನು ತೆರವುಗೊಳಿಸಲು ಪಾಲಿಕೆ ಸಿಬ್ಬಂದಿ ಹರಸಾಹಸಪಡುವಂತಾಯಿತು.

ಸತತ ಮಳೆಯಿಂದಾಗಿ ಡಾ. ರಾಜ್ ಕುಮಾರ್ ರಸ್ತೆ ಮೇಲೆ ಬಿದಿದ್ದ ಮರದಿಂದಾಗಿ ಸುಬ್ರಮಣ್ಯಪುರ ಸುತ್ತಮುತ್ತಲಿನ ಪ್ರದೇಶಗಳಿಗೆ ತೆರಳುವ ವಾಹನ ಸವಾರರಿಗೆ ತೀವ್ರ ರೀತಿಯ ತೊಂದರೆ ಉಂಟಾಗಿತ್ತು.ನಂತರ ಪಾಲಿಕೆ ಸಿಬ್ಬಂದಿ ಹರಸಾಹಸಪಟ್ಟು ಮರವನ್ನು ತೆರವುಗೊಳಿಸಿ, ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಪಾಲಿಕೆ ಆಯುಕ್ತ ಬಿ.ಹೆಚ್ . ಅನಿಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಮಳೆಯಿಂದಾಗಿ ಆಗಿರುವ ನಷ್ಟದ ಬಗ್ಗೆ ಪರಿಶೀಲನೆ ನಡೆಸಿದರು. 

ಚಾಮರಾಜಪೇಟೆಯಲ್ಲಿ ಬೃಹದಾಕಾರದ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ಸಂಪೂರ್ಣವಾಗಿ ಜಖಂಗೊಂಡಿರುವ ಘಟನೆ ನಡೆದಿದೆ. ಬಿಟ್ಟು ಬಿಟ್ಟು ಬರುತ್ತಿದ್ದ ಮಳೆಯಿಂದಾಗಿ ರಸ್ತೆ ಮೇಲೆ ನೀರು ತುಂಬಿ ಕೆರೆಯಂತಾಗಿತ್ತು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಇಡೀ ರಾತ್ರಿ ಪರದಾಡುವಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT