ಅಶ್ವತ್ಥ ನಾರಾಯಣ 
ರಾಜ್ಯ

ಕೆಎಸ್ ಒಯುನಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ: ಅಶ್ವತ್ಥ ನಾರಾಯಣ

ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವವರ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ವಹಿಸುವ ಮೂಲಕ ಕಾರ್ಯಸೂಚಿ ರೂಪಿಸಲು ಉಪ ಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥ ನಾರಾಯಣ ಸೂಚಿಸಿದ್ದಾರೆ.

ಬೆಂಗಳೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವವರ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ವಹಿಸುವ ಮೂಲಕ ಕಾರ್ಯಸೂಚಿ ರೂಪಿಸಲು ಉಪ ಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥ ನಾರಾಯಣ ಸೂಚಿಸಿದ್ದಾರೆ.

ಕರ್ನಾಟಕ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ತರಬೇತಿ ಕಾರ್ಯಕ್ರಮದ ಸಮಾರೋಪದಲ್ಲಿ ಆನ್‌ಲೈನ್‌ ಮೂಲಕ ಭಾಗವಹಿಸಿ ಮಾತನಾಡಿದ ಅವರು, ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವವರ ಪ್ರಮಾಣ ಹೆಚ್ಚಿಸುವಲ್ಲಿ ಮುಕ್ತ ವಿಶ್ವವಿದ್ಯಾಲಯ ಅತಿ ಮುಖ್ಯವಾದ ಪಾತ್ರವಹಿಸಬೇಕು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನಾನಾ ವಿಷಯ ತಜ್ಞರನ್ನು ಈ ಕಾರ್ಯಕ್ರಮಕ್ಕೆ ನೋಂದಾಯಿಸಿಕೊಂಡು, ವಿದ್ಯಾರ್ಥಿಗಳಿಗೂ ಎಲ್ಲ ರೀತಿಯ ಸೌಕರ್ಯ ಕಲ್ಪಿಸಿ ಕೆ-ಸೆಟ್‌ ಪರೀಕ್ಷೆಗೆ ಉತ್ತಮ ತರಬೇತಿ ನೀಡಲಾಗಿದೆ ಎಂದರು.

ಮುಕ್ತ ವಿವಿ ವಿರುದ್ಧ ಹಣ ದುರ್ಬಳಕೆ ಸೇರಿ ಹಲವು ಆರೋಪಗಳಿದ್ದು, ಇಂತಹ ಕಳಂಕಗಳಿಂದ ಮುಕ್ತರಾಗಲು ಕ್ರಿಯಾ ಯೋಜನೆ ರೂಪಿಸಬೇಕು. ಉತ್ತಮ ಶಿಕ್ಷಣಕ್ಕೆ ವ್ಯವಸ್ಥೆ ಕಲ್ಪಿಸುವ ಜತೆಗೆ ಆಡಳಿತದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ ಮಾದರಿ ವ್ಯವಸ್ಥೆ ತರಲು ಆದೇಶಿಸಲಾಗಿದೆ ಎಂದು ಅವರು ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT