ದತ್ತಾತ್ರೇಯ ಪಾಟೀಲ 
ರಾಜ್ಯ

ಶಾಸಕ ದತ್ತಾತ್ರೇಯ ‌ಪಾಟೀಲ ರೇವೂರ ಲಂಚಕ್ಕೆ ಬೇಡಿಕೆ: ಅಧಿಕಾರಿಯಿಂದ ದೂರು ದಾಖಲು

ಕಲಬುರಗಿ ದಕ್ಷಿಣ ‌ಕ್ಷೇತ್ರದ ಶಾಸಕ ದತ್ತಾತ್ರೇಯ ‌ಪಾಟೀಲ ರೇವೂರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದ ಜಿಲ್ಲಾ ಬಿಸಿಎಂ ಅಧಿಕಾರಿ ರಮೇಶ ಸಂಗಾ ಅವರಿಗೆ ‌ಶಾಸಕರ ಬೆಂಬಲಿಗರಾದ ಪಾಲಿಕೆ ಸದಸ್ಯ ಪ್ರಭು ಹಾದಿಮನಿ ಹಾಗೂ ಚಂದ್ರಕಾಂತ ‌ಎಂಬುವವರು ಜೀವ ಬೆದರಿಕೆ ‌ಹಾಕಿದ್ದಾರೆ ಎಂದು ದೂರಿದ್ದಾರೆ.

ಕಲಬುರಗಿ: ಕಲಬುರಗಿ ದಕ್ಷಿಣ ‌ಕ್ಷೇತ್ರದ ಶಾಸಕ ದತ್ತಾತ್ರೇಯ ‌ಪಾಟೀಲ ರೇವೂರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದ ಜಿಲ್ಲಾ ಬಿಸಿಎಂ ಅಧಿಕಾರಿ ರಮೇಶ ಸಂಗಾ ಅವರಿಗೆ ‌ಶಾಸಕರ ಬೆಂಬಲಿಗರಾದ ಪಾಲಿಕೆ ಸದಸ್ಯ ಪ್ರಭು ಹಾದಿಮನಿ ಹಾಗೂ ಚಂದ್ರಕಾಂತ ‌ಎಂಬುವವರು ಜೀವ ಬೆದರಿಕೆ ‌ಹಾಕಿದ್ದಾರೆ ಎಂದು ದೂರಿದ್ದಾರೆ.

ರಾತ್ರಿ ಹಲವು ಬಾರಿ ತಮಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಶ್ವವಿದ್ಯಾಲಯ ಠಾಣೆ ಪೊಲೀಸರಿಗೆ ರಾತ್ರಿ 3 ಗಂಟೆಗೆ ದೂರು   ನೀಡಿದ್ದಾರೆ. ಶಾಸಕ ಪಾಟೀಲ ಬಡವರಿಗಾಗಿ ದಿನಸಿ ಕಿಟ್ ನೀಡುತ್ತಿದ್ದು, ಅದಕ್ಕಾಗಿ ನೆರವು ನೀಡುವಂತೆ ತಮ್ಮ ಆಪ್ತಸಹಾಯಕ ಪ್ರವೀಣ ಮೂಲಕ ಸಂಗಾ ಅವರಿಗೆ ಕರೆ ಮಾಡಿಸಿದ್ದರು. ಆದರೆ ಸಂಗಾ ಹಣ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಶಾಸಕರು ಹಲವು ಬಾರಿ ತಮಗೆ ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಸಂಗಾ ದೂರು
ದಾಖಲಿಸಿದ್ದಾರೆ.

ಆದರೆ ಅಧಿಕಾರಿಯ ಆರೋಪವನ್ನು ಶಾಸಕ ದತ್ತಾತ್ರೇಯ ಪಾಟೀಲ ಅಲ್ಲಗಳೆದಿದ್ದಾರೆ. ಸೋಂಕಿತರನ್ನು ತನ್ನ ಕ್ಷೇತ್ರದಲ್ಲಿ ಕ್ವಾರಂಟೈನ್ ಮಾಡುವುದಕ್ಕೆ ಜನ ವಿರೋಧಿಸಿದ್ದರಿಂದ ಬೇಡವೆಂದು ಹೇಳಿರೋದಾಗಿ ಒಪ್ಪಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT