ದತ್ತಾತ್ರೇಯ ಪಾಟೀಲ 
ರಾಜ್ಯ

ಶಾಸಕ ದತ್ತಾತ್ರೇಯ ‌ಪಾಟೀಲ ರೇವೂರ ಲಂಚಕ್ಕೆ ಬೇಡಿಕೆ: ಅಧಿಕಾರಿಯಿಂದ ದೂರು ದಾಖಲು

ಕಲಬುರಗಿ ದಕ್ಷಿಣ ‌ಕ್ಷೇತ್ರದ ಶಾಸಕ ದತ್ತಾತ್ರೇಯ ‌ಪಾಟೀಲ ರೇವೂರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದ ಜಿಲ್ಲಾ ಬಿಸಿಎಂ ಅಧಿಕಾರಿ ರಮೇಶ ಸಂಗಾ ಅವರಿಗೆ ‌ಶಾಸಕರ ಬೆಂಬಲಿಗರಾದ ಪಾಲಿಕೆ ಸದಸ್ಯ ಪ್ರಭು ಹಾದಿಮನಿ ಹಾಗೂ ಚಂದ್ರಕಾಂತ ‌ಎಂಬುವವರು ಜೀವ ಬೆದರಿಕೆ ‌ಹಾಕಿದ್ದಾರೆ ಎಂದು ದೂರಿದ್ದಾರೆ.

ಕಲಬುರಗಿ: ಕಲಬುರಗಿ ದಕ್ಷಿಣ ‌ಕ್ಷೇತ್ರದ ಶಾಸಕ ದತ್ತಾತ್ರೇಯ ‌ಪಾಟೀಲ ರೇವೂರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದ ಜಿಲ್ಲಾ ಬಿಸಿಎಂ ಅಧಿಕಾರಿ ರಮೇಶ ಸಂಗಾ ಅವರಿಗೆ ‌ಶಾಸಕರ ಬೆಂಬಲಿಗರಾದ ಪಾಲಿಕೆ ಸದಸ್ಯ ಪ್ರಭು ಹಾದಿಮನಿ ಹಾಗೂ ಚಂದ್ರಕಾಂತ ‌ಎಂಬುವವರು ಜೀವ ಬೆದರಿಕೆ ‌ಹಾಕಿದ್ದಾರೆ ಎಂದು ದೂರಿದ್ದಾರೆ.

ರಾತ್ರಿ ಹಲವು ಬಾರಿ ತಮಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಶ್ವವಿದ್ಯಾಲಯ ಠಾಣೆ ಪೊಲೀಸರಿಗೆ ರಾತ್ರಿ 3 ಗಂಟೆಗೆ ದೂರು   ನೀಡಿದ್ದಾರೆ. ಶಾಸಕ ಪಾಟೀಲ ಬಡವರಿಗಾಗಿ ದಿನಸಿ ಕಿಟ್ ನೀಡುತ್ತಿದ್ದು, ಅದಕ್ಕಾಗಿ ನೆರವು ನೀಡುವಂತೆ ತಮ್ಮ ಆಪ್ತಸಹಾಯಕ ಪ್ರವೀಣ ಮೂಲಕ ಸಂಗಾ ಅವರಿಗೆ ಕರೆ ಮಾಡಿಸಿದ್ದರು. ಆದರೆ ಸಂಗಾ ಹಣ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಶಾಸಕರು ಹಲವು ಬಾರಿ ತಮಗೆ ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಸಂಗಾ ದೂರು
ದಾಖಲಿಸಿದ್ದಾರೆ.

ಆದರೆ ಅಧಿಕಾರಿಯ ಆರೋಪವನ್ನು ಶಾಸಕ ದತ್ತಾತ್ರೇಯ ಪಾಟೀಲ ಅಲ್ಲಗಳೆದಿದ್ದಾರೆ. ಸೋಂಕಿತರನ್ನು ತನ್ನ ಕ್ಷೇತ್ರದಲ್ಲಿ ಕ್ವಾರಂಟೈನ್ ಮಾಡುವುದಕ್ಕೆ ಜನ ವಿರೋಧಿಸಿದ್ದರಿಂದ ಬೇಡವೆಂದು ಹೇಳಿರೋದಾಗಿ ಒಪ್ಪಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT