ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶ 
ರಾಜ್ಯ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ: ಅನಧಿಕೃತ ಕಟ್ಟಡಗಳ ತೆರವಿಗೆ ಜಿಲ್ಲಾಧಿಕಾರಿ ನೋಟಿಸ್

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವ್ಯಾಪ್ತಿಗೆ ಬರುವ ಪ್ರದೇಶದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಿರುವವರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಜಿಲ್ಲಾಧಿಕಾರಿಯವರಾದ ಜಿಲ್ಲಾಧಿಕಾರಿ ಡಾ. ಎಂಆರ್ ರವಿ ಅವರು ಈಗಾಗಲೇ ಕಟ್ಟಡ ನಿರ್ಮಾಣ ಮಾಡಿರುವ ಸಂಬಂಧ 8 ಮಂದಿಗೆ ಕಟ್ಟಡ ತೆರವುಗೊಳಿಸಲು ಸೂಚಿಸಿ ನೋಟಿಸ್ ಜಾರಿ ಮಾಡಿದ್ದಾರೆ.

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವ್ಯಾಪ್ತಿಗೆ ಬರುವ ಪ್ರದೇಶದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಿರುವವರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಜಿಲ್ಲಾಧಿಕಾರಿಯವರಾದ ಜಿಲ್ಲಾಧಿಕಾರಿ ಡಾ. ಎಂಆರ್ ರವಿ ಅವರು ಈಗಾಗಲೇ ಕಟ್ಟಡ ನಿರ್ಮಾಣ ಮಾಡಿರುವ ಸಂಬಂಧ 8 ಮಂದಿಗೆ ಕಟ್ಟಡ ತೆರವುಗೊಳಿಸಲು ಸೂಚಿಸಿ ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೇ ಇನ್ನು ಉಳಿದ 7 ಅಕ್ರಮ ಕಟ್ಟಡ ಸಂಬಂಧ ಕ್ರಮಕ್ಕೆ ಜಿಲ್ಲಾಧಿಕಾರಿಯವರು ಮುಂದಾಗಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವನ್ನು ಸೂಕ್ಷ್ಮ ಪರಿಸರ ವಲಯವೆಂದು ಕೇಂದ್ರಸರ್ಕಾರ 2012ರ ಅಕ್ಟೋಬರ್ 4ರಂದು ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆ ಪ್ರಕಾರ ಪ್ರಸ್ತುತ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕರಡು ಅಧಿಸೂಚನೆ ದಿನಾಂಕ: 31-08-2010ರ ನಂತರ ಕಟ್ಟಡ ನಿರ್ಮಾಣ ಮಾಡಿರುವ 3 ಪ್ರಕರಣಗಳಲ್ಲಿ ಅನ್ಯಕ್ರಾಂತವಾಗಿರುವ ಆದೇಶವನ್ನು ರದ್ದುಪಡಿಸುವ ಕ್ರಮಕ್ಕೆ ಜಿಲ್ಲಾಧಿಕಾರಿಯವರು ಮುಂದಾಗಿದ್ದಾರೆ. 

ಪ್ರವಾಸೋದ್ಯಮ ಇಲಾಖೆಯವರು ಅನುಮತಿಸಿರುವ ಯಾವುದೇ ಅನ್ಯಕ್ರಾಂತವಾಗದೇ ನಿರ್ಮಿಸಿರುವ 3 ಹೋಮ್‍ಸ್ಟೇ ಕಟ್ಟಡಗಳಿಗೆ ನೀಡಿರುವ ಅನುಮತಿಯನ್ನು ಹಿಂಪಡೆಯುವ ಆದೇಶಕ್ಕೆ ಜಿಲ್ಲಾಧಿಕಾರಿಯವರು ಕ್ರಮ ತೆಗೆದುಕೊಂಡಿದ್ದಾರೆ. ಅನುಮತಿ ಪಡೆಯದ ಇನ್ನೊಂದು ಹೋಮ್ ಸ್ಟೇ ನಡೆಸದಂತೆ ಬೀಗಮುದ್ರೆ ಹಾಕಲಾಗಿತ್ತು. ಆದರೂ ಸಹ ಬೀಗಮುದ್ರೆ ಆದೇಶ ಉಲ್ಲಂಘಿಸಿ ಹೋಮ್ ಸ್ಟೇ ತೆರೆದು ಕಟ್ಟಡ ದುರಸ್ತಿ ಕಾರ್ಯ ಕೈಗೊಂಡಿದ್ದ ಸದರಿ ಹೋಮ್ ಸ್ಟೇ ಮಾಲೀಕರ ವಿರುದ್ಧ ಕ್ರಮಿನಲ್ ಮೊಕದ್ದಮೆ ಹೂಡಲು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ. 

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವನ್ನು ಸೂಕ್ಷ್ಮ ಪರಿಸರ ವಲಯವೆಂದು ಅಧಿಸೂಚನೆ ಹೊರಡಿಸಿದ್ದು, ಇದರ ಅನುಸಾರ ಬಂಡೀಪುರ ಕಾಡಂಚಿನ ಒಟ್ಟು 123 ಗ್ರಾಮಗಳು ಸೂಕ್ಷ್ಮ ಪರಿಸರ ವಲಯ ವ್ಯಾಪ್ತಿಗೆ ಬರುತ್ತಿದ್ದು, ಸದರಿ ಗ್ರಾಮಗಳಲ್ಲಿ ವಾಣಿಜ್ಯ ಉದ್ದೇಶಕ್ಕೆ ಚಟುವಟಿಕೆ ಕೈಗೊಳ್ಳಲು ಅವಕಾಶವಿರುವುದಿಲ್ಲ. ಆದಾಗಿಯೂ ಅಧಿಸೂಚನೆ ಉಲ್ಲಂಘಿಸಿ ಬೃಹತ್ ಕಟ್ಟಡ ನಿರ್ಮಾಣ ಮಾಡಲಾಗಿದೆ. ಪೂರ್ವಾನುಮತಿ ಪಡೆಯದೇ ನಿರ್ಮಿಸಲಾಗಿರುವ ಅಕ್ರಮ ಕಟ್ಟಡಗಳ ತೆರವಿಗೆ ಕ್ರಮ ವಹಿಸುವಂತೆ ಬಂಡೀಪುರ ಹುಲಿ ಯೋಜನೆಯ ಅರಣ್ಯ ಸಂರಕ್ಷಣಾಧಿಕಾರಿ ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರು ವರದಿ ನೀಡುವಂತೆ ತಹಶೀಲ್ದಾರರಿಗೆ ಪತ್ರ ಬರೆದಿದ್ದರು. ತಹಶೀಲ್ದಾರರು ನೀಡಿದ ವರದಿ ಅನ್ವಯ ಜಿಲ್ಲಾಧಿಕಾರಿಯವರು ಕ್ರಮಕ್ಕೆ ಮುಂದಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT