ಕೋಟ ಶ್ರೀನಿವಾಸ ಪೂಜಾರಿ 
ರಾಜ್ಯ

ಜೂನ್ 15ರವರೆಗೆ ಮೀನುಗಾರಿಕೆಗೆ ಕೇಂದ್ರ ಅನುಮತಿ: ಕೋಟ ಶ್ರೀನಿವಾಸ ಪೂಜಾರಿ

ವಿದ್ಯುತ್ ಗ್ರಾಹಕರಿಗೆ ಅಧಿಕ ಬಿಲ್ ಬಂದಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಂದಿಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮಂಗಳೂರು: ವಿದ್ಯುತ್ ಗ್ರಾಹಕರಿಗೆ ಅಧಿಕ ಬಿಲ್ ಬಂದಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಂದಿಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿ, ಎರಡು ತಿಂಗಳ ಬಿಲ್‍ಗಳನ್ನು ಒಟ್ಟಿಗೆ ನೀಡಿದ್ದರೂ, ನಿಗದಿತ ಸರಾಸರಿ ದರಕ್ಕಿಂದ ಹೆಚ್ಚು ಮೊತ್ತದ ಬಿಲ್ ಮೆಸ್ಕಾಂ ನೀಡಿರುವುದರ ಬಗ್ಗೆ ಸಾರ್ವಜನಿಕರ ಅಸಮಾಧಾನ ತನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ  ಈಗಾಗಲೇ ಮೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಶನಿವಾರ ಮತ್ತೊಮ್ಮೆ ಸಭೆ ನಡೆಸಿ, ಗ್ರಾಹಕರಿಗೆ ಅನ್ಯಾಯವಾಗದಂತೆ ಗಮನಹರಿಸಲು ನಿರ್ದೇಶಿಸಲಾಗುವುದು ಎಂದು ಹೇಳಿದರು. ಮೀನುಗಾರಿಕೆ ಅವಧಿಯನ್ನು ಕೇಂದ್ರ ಸರಕಾರ ಜೂನ್ 15ರವರೆಗೆ ವಿಸ್ತರಿಸಿ  ಆದೇಶಿಸಿದೆ. ರಾಜ್ಯ ಸರಕಾರವೂ ಇದರನ್ವಯ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ ವಿಮಾ ಕಂಪೆನಿ ಸೇರಿದಂತೆ ಸಂಬಂಧಪಟ್ಟವರಿಗೆ ಸೂಕ್ತ ಸೂಚನೆ ನೀಡಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ರಾಜ್ಯದಲ್ಲಿ ಒಳನಾಡ ಮೀನುಗಾರಿಕೆ ಅಭಿವೃದ್ಧಿಪಡಿಸಲು ಈಗಾಗಲೇ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿದೆ. ಮುಂದಿನ 10 ವರ್ಷದಲ್ಲಿ ಮೀನುಮರಿ ಉತ್ಪಾದನೆ ಸೇರಿದಂತೆ ಈ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿಗೆ ಕಾರ್ಯಯೋಜನೆ ರೂಪಿಸಲಾಗುವುದು ಎಂದು ಸಚಿವರು ಹೇಳಿದರು
 

ರಾಜ್ಯದಲ್ಲಿ ಜೂನ್ 1ರಿಂದ ದೇವಸ್ಥಾನ, ಮಸೀದಿ, ಚರ್ಚ್ ಮತ್ತಿತರ ಧಾರ್ಮಿಕ ಸ್ಥಳಗಳನ್ನು ತೆರೆಯುವ ಬಗ್ಗೆ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಬಗ್ಗೆ ಕೇಂದ್ರ ಸರಕಾರದ ಅನುಮೋದನೆ ನಿರೀಕ್ಷೆಯಲ್ಲಿದ್ದೇವೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು. ಈ ಸಂದರ್ಭದಲ್ಲಿ ಜಿ.ಪಂ.  ಸ್ಥಾಯೀ ಸಮಿತಿ ಅಧ್ಯಕ್ಷ ರವೀಂದ್ರ ಕಂಬಳಿ, ಜಿ.ಪಂ. ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT