ಪಾದರಾಯನಪುರ ಆರೋಪಿಗಳು (ಸಂಗ್ರಹ ಚಿತ್ರ) 
ರಾಜ್ಯ

ಪಾದರಾಯನಪುರ ಗಲಾಟೆ ಪ್ರಕರಣ: ಎಲ್ಲ 126 ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು

ಇಡೀ ದೇಶದ ಗಮನ ಸೆಳೆದಿದ್ದ ಪಾದರಾಯಣಪುರದ ಕೊರೋನಾ ವಾರಿಯರ್ಸ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಎಲ್ಲ 126 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.

ಬೆಂಗಳೂರು: ಇಡೀ ದೇಶದ ಗಮನ ಸೆಳೆದಿದ್ದ ಪಾದರಾಯಣಪುರದ ಕೊರೋನಾ ವಾರಿಯರ್ಸ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಎಲ್ಲ 126 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.

ಪಾದರಾಯನಪುರದಲ್ಲಿ ಪೊಲೀಸರು, ವೈದ್ಯಕೀಯ ಸಿಬ್ಬಂದಿಗಳು ಮತ್ತು ಆಶಾಕಾರ್ಯಕರ್ತೆಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 126 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ದೊರೆತಿದೆ. ಹೈಕೋರ್ಟ್‌ ನ್ಯಾಯಮೂರ್ತಿ ಜಾನ್‌ ಮೈಕಲ್‌ ಕುನ್ಹಾ ಪೀಠವು ಷರತ್ತುಬದ್ಧ  ಜಾಮೀನು ನೀಡಿ ಆದೇಶಿಸಿದೆ. 

ಜಾಮೀನು ನೀಡುವ ಸಂದರ್ಭ ನ್ಯಾಯಾಲಯ ಹಲವು ಷರತ್ತುಗಳನ್ನು ವಿಧಿಸಿದ್ದು, ಆರೋಪಿಗಳು 1 ಲಕ್ಷ ರೂಪಾಯಿ ಶ್ಯೂರಿಟಿ ಬಾಂಡ್‌ ನೀಡಬೇಕು. ಎಲ್ಲರೂ ಕೊರೋನಾ ಟೆಸ್ಟ್‌ ಮಾಡಿಸಿಕೊಳ್ಳಬೇಕು. ಕೊರೋನಾ ಮಾರ್ಗಸೂಚಿ ಪಾಲಿಸಬೇಕು. ಇಲ್ಲವಾದಲ್ಲಿ ಜಾಮೀನು ರದ್ದು  ಮಾಡಲಾಗುವುದು ಎಂಬ ಷರತ್ತುಗಳನ್ನು ವಿಧಿಸಿದೆ. ಅಲ್ಲದೆ ಪ್ರಕರಣದ ಆರೋಪಿಗಳಿಗೆ ಕೊರೋನಾ ಪಾಸಿಟಿವ್‌ ಇದ್ದರೆ, ಸರ್ಕಾರದ ನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.

ಪಾದರಾಯನಪುರದಲ್ಲಿ ಮತ್ತೆ ಗಲಾಟೆ:
ಪಾದರಾಯನಪುರದಲ್ಲಿ ಸ್ಥಳೀಯರು ಸೀಲ್‌ಡೌನ್‌ ತೆರವುಗೊಳಿಸಲು ಮತ್ತೆ ಗಲಾಟೆ ಆರಂಭಿಸಿದ್ದಾರೆ. ಅಧಿಕಾರಿಗಳು ಪಾದರಾಯನಪುರದ ಒಂದು ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದ್ದರು. ಈ ಬೆನ್ನಲ್ಲೇ ಮತ್ತೊಂದು ರಸ್ತೆಯನ್ನೂ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಮಹಿಳೆಯರೂ ಸೇರಿದಂತೆ ಸ್ಥಳೀಯರು ಅಧಿಕಾರಿಗಳ ವಿರುದ್ಧ ಬೀದಿಗಿಳಿದು ಗಲಾಟೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT