ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ವೈರಸ್: ಅಲ್ಪ ಸಂಖ್ಯಾತ ಪ್ರಾರ್ಥನಾ ಮಂದಿರಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಆಯೋಗ

ಮಾರಕ ಕೊರೋನಾ ವೈರಸ್ ಲಾಕ್ ಡೌನ್ 5.0 ಜಾರಿಯಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಅಲ್ಪ ಸಂಖ್ಯಾತರ ಪ್ರಾರ್ಥನಾ ಮಂದಿರಗಳನ್ನು ತೆರೆಯಲು ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯ ಅಲ್ಪ ಸಂಖ್ಯಾತರ ಆಯೋಗ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಬೆಂಗಳೂರು: ಮಾರಕ ಕೊರೋನಾ ವೈರಸ್ ಲಾಕ್ ಡೌನ್ 5.0 ಜಾರಿಯಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಅಲ್ಪ ಸಂಖ್ಯಾತರ ಪ್ರಾರ್ಥನಾ ಮಂದಿರಗಳನ್ನು ತೆರೆಯಲು ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯ ಅಲ್ಪ ಸಂಖ್ಯಾತರ ಆಯೋಗ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಜೂನ್ 8ರಿಂದ ಮಸೀದಿ, ದರ್ಗಾ ತೆರೆಯಲು ಅನುಮತಿ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದಿಂದ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಅಲ್ಪಸಂಖ್ಯಾತ ಆಯೋಗ ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ಪ್ರಮುಖಾಂಶಗಳು ಇಂತಿದೆ
1.ಎಲ್ಲರೂ ಮನೆಯಲ್ಲೇ ಸ್ವಚ್ಛತೆ ಮಾಡಿಕೊಂಡು ಬರಬೇಕು. 
2.ಮಸೀದಿ ಆವರಣದಲ್ಲಿ ವಜುಕೊಳದ ಬದಲು ನಲ್ಲಿ ಬಳಕೆ.
3.ಶೌಚಾಲಯಗಳನ್ನು ಶುಚಿಯಾಗಿ ಇಡಬೇಕು
4.ಮಸೀದಿಯ ಒಳಗೆ, ಹೊರಗೆ ಹೋಗಲು ಒಂದೇ ದ್ವಾರ
5.ಪ್ರಾರ್ಥನೆಗೂ ಮುನ್ನ ಸಭಾಂಗಣದಲ್ಲಿ ಫ್ಯೂಮಿಗೇಷನ್ (ರಾಸಾಯನಿಕ ಗ್ಯಾಸ್ ಸಿಂಪಡಣೆ ಮೂಲಕ ಸೋಂಕು ನಿವಾರಣೆ) ಕಡ್ಡಾಯ
6.ಪ್ರಾರ್ಥನಾ ಸಭಾಂಗಣದ ಪ್ರವೇಶಕ್ಕೂ ಮುನ್ನ ಪರೀಕ್ಷೆ ಎಲ್ಲರ ದೇಹದ ಉಷ್ಣಾಂಶ ಪರೀಕ್ಷೆ ಕಡ್ಡಾಯ
7.ಮಸೀದಿಯಲ್ಲಿ ಕನಿಷ್ಠ 1-2 ಮೀಟರ್ ಸಾಮಾಜಿಕ ಅಂತರ ಕಡ್ಡಾಯ
8.10-15 ನಿಮಿಷಗಳಲ್ಲಿ ಪ್ರಾರ್ಥನೆಯನ್ನು ಮುಗಿಸಬೇಕು
9.ಪ್ರಾರ್ಥನೆಗೆ ಬರುವವರು ಪ್ರೇಯರ್ ಮ್ಯಾಟ್ ತರಬೇಕು
10.ಸುನ್ನತ್, ನಫೀಲ್ ಪ್ರಾರ್ಥನೆ ಮನೆಯಲ್ಲೇ ಮಾಡಬೇಕು
11.ಮಸೀದಿ ಆವರಣದಲ್ಲಿ ನಿಂತು ಚರ್ಚೆಯಲ್ಲಿ ತೊಡಗಬಾರದು
12.ಮಸೀದಿ, ದರ್ಗಾ ಆವರಣದಲ್ಲಿ ಭಿಕ್ಷಾಟನೆ ನಿಷೇಧ
13.ಗೋರಿಗಳ ಮೇಲೆ ನಮಸ್ಕರಿಸುವುದನ್ನು ನಿಷೇಧ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT