ಪೊಲೀಸ ಕಾನ್ಸ್ ಟೇಬಲ್ ಜಿ.ಎನ್. ರವಿಕುಮಾರ್ 
ರಾಜ್ಯ

ಅರಮನೆ ಮೈದಾನದಲ್ಲಿ ಶೆಲ್ಟರ್ ಕುಸಿತ: ಮಕ್ಕಳನ್ನು ರಕ್ಷಿಸಿದ ಟ್ರೈನಿ ಪೊಲೀಸ್ ಕಾನ್ಸ್ ಟೇಬಲ್

ಭಾರೀ ಮಳೆಯಿಂದಾಗಿ ಶುಕ್ರವಾರ ರಾತ್ರಿ ಅರಮನೆ ಮೈದಾನದಲ್ಲಿ ವಲಸೆ ಕಾರ್ಮಿಕರು ಹಾಗೂ ಅವರ ಮಕ್ಕಳು ಆಶ್ರಯ ಪಡೆದಿದ್ದ ತಾತ್ಕಾಲಿಕ ಶೆಲ್ಟರ್ ಗಳು ಕುಸಿಯತೊಡಗಿದ್ದವು. ಇದನ್ನು ನೋಡಿದ  ಪೊಲೀಸ್ ಕಾನ್ಸ್ ಟೇಬಲ್ ಜಿಎನ್ ರವಿಕುಮಾರ್ ಅವರನ್ನು ರಕ್ಷಿಸಿದ್ದಾರೆ. 

ಬೆಂಗಳೂರು: ಭಾರೀ ಮಳೆಯಿಂದಾಗಿ ಶುಕ್ರವಾರ ರಾತ್ರಿ ಅರಮನೆ ಮೈದಾನದಲ್ಲಿ ವಲಸೆ ಕಾರ್ಮಿಕರು ಹಾಗೂ ಅವರ ಮಕ್ಕಳು ಆಶ್ರಯ ಪಡೆದಿದ್ದ ತಾತ್ಕಾಲಿಕ ಶೆಲ್ಟರ್ ಗಳು ಕುಸಿಯತೊಡಗಿದ್ದವು. ಇದನ್ನು ನೋಡಿದ  ಪೊಲೀಸ್ ಕಾನ್ಸ್ ಟೇಬಲ್ ಜಿಎನ್ ರವಿಕುಮಾರ್ ಅವರನ್ನು ರಕ್ಷಿಸಿದ್ದು, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅವರ ಪೋಷಕರಿಗೆ ಸಲಹೆ ನೀಡಿದ್ದಾರೆ.

ಪೊಲೀಸ್ ಇಲಾಖೆಗೆ ಸೇರಿ ಕೇವಲ ಮೂರು ತಿಂಗಳಾಗಿರುವ 27 ವರ್ಷದ ರವಿಕುಮಾರ್ ಅವರನ್ನು ಅರಮೈನ ಮೈದಾನದಲ್ಲಿದ್ದ ವಲಸೆ ಕಾರ್ಮಿಕರ ಮೇಲೆ ಕಣ್ಣಿಡಲು ನಿಯೋಜಿಸಲಾಗಿತ್ತು.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ರವಿಕುಮಾರ್,ಟೆನಿಸ್ ಪೆವಿಲಿಯನ್ ನಲ್ಲಿ ವಲಸೆ ಕಾರ್ಮಿಕರಿಗಾಗಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಶೆಲ್ಟರ್ ಗಳ ಮೇಲೆ ಬಿರುಗಾಳಿಗಾಳಿದ ಮರದ ಕೊಂಬೆಯೊಂದು ಬಿದ್ದಿತ್ತು.ಇದರಿಂದ ಶೆಲ್ಟರ್ ನ ಭಾಗವೊಂದು ಹಾನಿಯಾಗಿ, ಇನ್ನೊಂದು ಮೂಲೆಗೆ  ವಲಸೆ ಕಾರ್ಮಿಕರು ತೆರಳಿದರು.ಇದನ್ನು ನೋಡಿದ ನಾನು ಶೆಲ್ಟರ್ ನ ಇನ್ನೊಂದು ಭಾಗವು ಕುಸಿಯುವ ಸಾಧ್ಯತೆ ಇದ್ದರಿಂದ ಅಲ್ಲಿದ್ದವರನ್ನು ಬೇರೆಡೆಗೆ ಕರೆದೊಯ್ದೆ. ಟೆಂಟ್ ನ ಒಳಗಡೆ ಇದ್ದ ಮೂವರು ಮಕ್ಕಳು ಹಾಗೂ ಮಹಿಳೆಯೊಬ್ಬರನ್ನು ಸುರಕ್ಷಿತವಾಗಿ ಹೊರಗೆ ತಂದಿದ್ದಾಗಿ ತಿಳಿಸಿದರು. 

ಪ್ರವಾಸೋದ್ಯಮ ನಿರ್ವಹಣೆಯಲ್ಲಿ ಎಂಬಿಎ ಪದವೀಧರನಾಗಿರುವ ರವಿಕುಮಾರ್, ಶಿವಮೊಗ್ದದ ಕುವೆಂಪು ವಿಶ್ವ ವಿದ್ಯಾನಿಯಲದ ಚಿನ್ನದ ಪದಕ ವಿಜೇತರಾಗಿದ್ದಾರೆ. ಜನರು ಪರ್ಸ್, ಚಪ್ಪಲಿಗಳನ್ನು ತೆಗೆದುಕೊಳ್ಳಲು ಕುಸಿದು ಬಿದ್ದಿರುವ ಅವಶೇಷಗಳ ಕಡೆಗೆ ಹೋಗದಂತೆ ಮನವೊಲಿಸುವುದು ತುಂಬಾ ಕಷ್ಟಕರವಾಗಿತ್ತು ಎಂದು ಅವರು ಹೇಳಿದ್ದಾರೆ. 

ರವಿಕುಮಾರ್ ಅವರ ಕಾರ್ಯವನ್ನು ಶ್ಲಾಘಿಸಿರುವ ಶಿವಾಜಿನಗರ ಇನ್ಸ್ ಪೆಕ್ಟರ್ ಸಿದ್ದರಾಜು, ರವಿಕುಮಾರ್ ಈಗಷ್ಟೇ ಕೆಲಸಕ್ಕೆ ಸೇರಿಕೊಂಡಿದ್ದಾರೆ. ಇನ್ನೂ ತರಬೇತಿಯನ್ನು ಪೂರ್ಣಗೊಳಿಸಿಲ್ಲ.  ಸೇವೆಗೆ ಸೇರಿದ ದಿನದಿಂದಲೂ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಹೊಗಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT