ಅಶೋಕ್ ಗಸ್ತಿ 
ರಾಜ್ಯ

ಅಶೋಕ್ ಗಸ್ತಿಯವರಿಂದ ತೆರವಾದ ರಾಜ್ಯಸಭೆ ಸ್ಥಾನಕ್ಕೆ ಚುನಾವಣೆ ದಿನಾಂಕ ಪ್ರಕಟ

ಕೋವಿಡ್ ನಿಂದಾಗಿ ಸೆಪ್ಟೆಂಬರ್ 17ರಂದು ನಿಧನರಾದ ಸಂಸದ  ಅಶೋಕ್ ಗಸ್ತಿ ಅವರಿಂದ ತೆರವಾದ ಕರ್ನಾಟಕದ ಒಂದು ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆಯ ದಿನಾಂಕವನ್ನು  ಚುನಾವಣಾ ಆಯೋಗ ಪ್ರಕಟಿಸಿದೆ.

ನವದೆಹಲಿ: ಕೋವಿಡ್ ನಿಂದಾಗಿ ಸೆಪ್ಟೆಂಬರ್ 17ರಂದು ನಿಧನರಾದ ಸಂಸದ  ಅಶೋಕ್ ಗಸ್ತಿ ಅವರಿಂದ ತೆರವಾದ ಕರ್ನಾಟಕದ ಒಂದು ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆಯ ದಿನಾಂಕವನ್ನು  ಚುನಾವಣಾ ಆಯೋಗ ಪ್ರಕಟಿಸಿದೆ.

ಆಯೋಗದ ಪ್ರಕಟಣೆಯಂತೆ ಡಿಸೆಂಬರ್ 1ರಂದು ಮತದಾನ ಮತ್ತು ಮತ ಎಣಿಕೆ ನಡೆಯಲಿದೆ.

ಬಿಜೆಪಿ ಮುಖಂಡರಾದ ಗಸ್ತಿ ಅವರು ಜುಲೈನಲ್ಲಿ ಮೊದಲ ಬಾರಿಗೆ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದರು ಆದರೆ ಕೋವಿಡ್ -19 ಕಾರಣ ಸಂಸತ್ತಿನ ಯಾವುದೇ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ.

ಚುನಾವಣಾ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗಿಯಾಗುವ ಎಲ್ಲರೂ ಫೇಸ್ ಮಾಸ್ಕ್ ಧರಿಸಬೇಕು ಎಂದು ಆಯೋಗ ಹೇಳಿದೆ.

ಡಿಸೆಂಬರ್ 1ರಂದು ರಾಜ್ಯಸಭೆ ಸ್ಥಾನಕ್ಕಾಗಿನ ಚುನಾವಣೆ ಜತೆಗೇ ಉತ್ತರ ಪ್ರದೇಶ ವಿಧಾನ ಪರಿಷತ್ತಿನ 11 ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಮತ್ತು ಮಹಾರಾಷ್ಟ್ರ ವಿಧಾನ ಪರಿಷತ್ತಿನ  ಐದು ಸ್ಥಾನಗಳಿಗೆ ಚುನಾವಣೆ ನಡೆಯುತ್ತದೆ ಎಂದು ಪ್ರಕಟಣೆ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT