ಮಾಜಿ ಮೇಯರ್ ಸಂಪತ್ ರಾಜ್ 
ರಾಜ್ಯ

ಸಂಪತ್ ರಾಜ್ ನಾಪತ್ತೆ ಪ್ರಕರಣ: ಸಿಸಿಬಿ ವಿಚಾರಣೆಗೆ ಹಾಜರಾದ ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರು

ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಸಿಬಿ ಪೊಲೀಸರು ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಸಿಬಿ ಪೊಲೀಸರು ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಮಾಜಿ ಮೇಯರ್ ಸಂಪತ್ ರಾಜ್ ಬ್ಯಾಪ್ಟಿಸ್ಟ್ ಆಸ್ಪತ್ರೆಯಿಂದ ಪರಾರಿಯಾಗಲು ನೆರವು ನೀಡಿದ ಶಂಕೆಯ ಮೇರೆಗೆ ಸಿಸಿಬಿ ಅಧಿಕಾರಿಗಳು ಆಸ್ಪತ್ರೆ ವೈದ್ಯರು ಮತ್ತು ಇತರೆ ಸಿಬ್ಬಂದಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ. ಇಂದು ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರು, ಆಡಳಿತ ಮಂಡಳಿ ಅವರು ನಗರದ  ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ತಮಗೆ ಕೊರೊನಾ ಸೋಂಕು ಇದೆ ಎಂದು ಸಮಜಾಯಿಷಿ ನೀಡಿ ಸಂಪತ್ ರಾಜ್ ಅವರುಈ ಹಿಂದೆ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಸಿಸಿಬಿ ಅಧಿಕಾರಿಗಳು ಆಸ್ಪತ್ರೆಗೆ ತೆರಳಿ ಸಂಪತ್ ರಾಜ್ ಅವರು ಆಸ್ಪತ್ರೆಯಿಂದ ಬಿಡುಗಡೆಗೊಳ್ಳುವ ಮುನ್ನ ತಮಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದ್ದರು. ಆದರೆ, ಸಂಪತ್ ರಾಜ್ ಕಳದೆ 29ರಂದು ರಾತ್ರೋರಾತ್ರಿ ಆಸ್ಪತ್ರೆಯಿಂದ ಬಿಡುಗಡೆಗೊಂಡು ನಾಪತ್ತೆಯಾಗಿದ್ದರು. 

ಸಂಪತ್ ರಾಜ್ ಬಗ್ಗೆ ಪೂರ್ವ ಸೂಚನೆ ನೀಡಿದ್ದರೂ, ಅವರು ಚಿಕಿತ್ಸೆ ಪಡೆಯುತ್ತಿದ್ದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಆಡಳಿತ ಮಂಡಳಿಯವರು ಅವರ ಪರಾರಿಗೆ ನೆರವಾಗಿದ್ದಾರೆ. ಅದ್ರೆ ಅಕ್ಟೋಬರ್ 29ರಂದು ರಾತ್ರೋರಾತ್ರಿ ಸಂಪತ್ ರಾಜ್ ಡಿಸ್ಚಾರ್ಜ್‌ ಆಗಿ ಕಣ್ಮರೆಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ.  ಈ ಹಿನ್ನೆಲೆಯಲ್ಲಿ ಅವರುಗಳಿಗೆಲ್ಲ ಸಿಸಿಬಿ ನೋಟಿಸ್ ನೀಡಿತ್ತು. 

ಸ್ಪಷ್ಟನೆ ನೀಡಲಿರುವ ಆಸ್ಪತ್ರೆಯ ಆಡಳಿತ ಮಂಡಳಿ
ಅದರಂತೆ ಇಂದು ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರು, ಆಡಳಿತ ಮಂಡಳಿಯವರು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿಂದೆ ಡಿಸ್ಚಾರ್ಜ್‌ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದರೂ ಬ್ಯಾಪ್ಟಿಸ್ಟ್ ಆಸ್ಪತ್ರೆ ನಿರ್ಲಕ್ಷ್ಯ ವಹಿಸಿದರು ಎಂದು ತಿಳಿದುಬಂದಿದೆ. ಈ ಬಗ್ಗೆ ಸಿಸಿಬಿ  ಅಧಿಕಾರಿಗಳು ಅಸ್ಪತ್ರೆಗೆ ಕಾರಣ ಕೇಳಿ ನೋಟಿಸ್ ನೀಡಿದ್ದರು. ಸಿಸಿಬಿ ನೋಟಿಸ್ ಹಿನ್ನೆಲೆಯಲ್ಲಿ ಚಾಮರಾಜಪೇಟೆಯ ಸಿಸಿಬಿ ಕಚೇರಿಯಲ್ಲಿ ಅಸ್ಪತ್ರೆಯ ಆರು ಮಂದಿ ವಿಚಾರಣೆಗೆ ಹಾಜರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT