ಸಾಂದರ್ಭಿಕ ಚಿತ್ರ 
ರಾಜ್ಯ

ಪ್ರಾಂಶುಪಾಲರು, ಶಿಕ್ಷಕರಿಗೆ ವೇತನ ಬಾಕಿ: ಸ್ವ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಲೋಕಾಯುಕ್ತರು

ರಾಜ್ಯದಲ್ಲಿರುವ 450 ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳ ಕನಿಷ್ಠ 532 ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ಕಳೆದ ಏಳು ತಿಂಗಳಿನಿಂದ ವೇತನವೇ ಸಿಕ್ಕಿಲ್ಲ. 

ಬೆಂಗಳೂರು: ರಾಜ್ಯದಲ್ಲಿರುವ 450 ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳ ಕನಿಷ್ಠ 532 ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ಕಳೆದ ಏಳು ತಿಂಗಳಿನಿಂದ ವೇತನವೇ ಸಿಕ್ಕಿಲ್ಲ. ಈ ಬಗ್ಗೆ ಇದೀಗ ಕರ್ನಾಟಕ ಲೋಕಾಯುಕ್ತ ಜಸ್ಟೀಸ್ ವಿಶ್ವನಾಥ ಶೆಟ್ಟಿ ಸ್ವಯಂ ಪ್ರೇರಿತವಾಗಿ ಕೇಸು ದಾಖಲಿಸಿಕೊಂಡು ಸಮಾಜ ಕಲ್ಯಾಣ ಇಲಾಖೆಗೆ ಶಿಕ್ಷಕರ ದೂರು-ದುಮ್ಮಾನಗಳು ಮತ್ತು ಸಂಕಷ್ಟಗಳನ್ನು ಆದಷ್ಟು ಬೇಗನೆ ಬಗೆಹರಿಸುವಂತೆ ಹೇಳಿದ್ದಾರೆ.

ಉದ್ಯೋಗಿಗೆ ಪಾವತಿಸುವ ವೇತನವು ಅನಪೇಕ್ಷಿತ ಪಾವತಿಗಳಲ್ಲ ಎಂದು ಗಮನಸೆಳೆಯುವ ಅಗತ್ಯವಿಲ್ಲ. ಒಬ್ಬ ನೌಕರನು ಅವನು / ಅವಳು ಕೈಗೊಂಡ ಕೆಲಸಕ್ಕಾಗಿ ಗಳಿಸಿದ ಮೊತ್ತವಾಗಿರುತ್ತದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಶೆಟ್ಟಿ ರಾಜ್ಯ ಸರ್ಕಾರವನ್ನು ನೆನಪಿಸಿದರು, ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ಸಂಬಳ ನೀಡುವಲ್ಲಿ ವಿಳಂಬವು ಅವರ ಜೀವನ ಹಕ್ಕಿನ ಮೇಲೆ ಗಂಭೀರವಾಗಿ ಪರಿಣಾಮ ಬೀರುತ್ತದೆ (ಸಂವಿಧಾನದ 21 ನೇ ವಿಧಿ ), ಮತ್ತು ಈ ಶಾಲೆಗಳಲ್ಲಿ ಓದುವ ಮಕ್ಕಳ ಶಿಕ್ಷಣ ಗುಣಮಟ್ಟದ ಮೇಲೆ ಸಹ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಈ ಬಗ್ಗೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಿಗೆ ನೊಟೀಸ್ ಜಾರಿಗೊಳಿಸಲು ಸಹ ಲೋಕಾಯುಕ್ತರು ಆದೇಶ ನೀಡಿದರು.
ಈ ಶಾಲೆಗಳು ಸಮಾಜ ಕಲ್ಯಾಣ ಇಲಾಖೆಯಡಿ ಬರುತ್ತಿದ್ದು, ಪ್ರಾಂಶುಪಾಲರು ಮತ್ತು ಶಿಕ್ಷಕರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಗುತ್ತಿಗೆ ನೌಕರರಿಗೆ ವೇತನ ನೀಡಬೇಕೆಂದು ಕಳೆದ ಆಗಸ್ಟ್ 26ರಂದು ಸರ್ಕಾರ ಹೇಳಿದರೂ ಕೂಡ ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ಇನ್ನೂ ವೇತನ ಬಿಡುಗಡೆಯಾಗಿಲ್ಲ ಎಂದು ತಿಳಿದುಬಂದಿದೆ.

ಬಾಕಿ ಉಳಿಕೆ ವೇತನವನ್ನು ಆದಷ್ಟು ಶೀಘ್ರವೇ ಬಿಡುಗಡೆ ಮಾಡುವಂತೆ ಹಿಂದಿನ ಸಮಾಜ ಕಲ್ಯಾಣ ಇಲಾಖೆ ಸಚಿವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದರೂ, ಅದಿನ್ನೂ ಕಾರ್ಯಗತವಾಗಿಲ್ಲ, ವೇತನ ಸಿಕ್ಕಿಲ್ಲ ಎಂಬ ಚಿಂತೆ ಒಂದೆಡೆಯಾದರೆ ಎಸ್ ಎಸ್ ಎಲ್ ಸಿ ಪರೀಕ್ಷೆ ಮರು ಮೌಲ್ಯಮಾಪನ ಮತ್ತು ಇನ್ನೂ ಹಲವು ಕರ್ತವ್ಯಗಳು ಈ ಶಿಕ್ಷಕರಿಗಿವೆ.

ಈ ಬಗ್ಗೆ ಮೂರು ವಾರಗಳಲ್ಲಿ ವರದಿ ನೀಡುವಂತೆ ಇಲಾಖೆಯ ಅಧಿಕಾರಿಗಳಿಗೆ ಲೋಕಾಯುಕ್ತರು ಆದೇಶ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇತಿಹಾಸ ತಿರುಚಲು' ಪ್ರಧಾನಿ ಮೋದಿ ಯತ್ನ; ನೆಹರೂ ಪರಂಪರೆ ಅಳಿಸಲು ಬಿಜೆಪಿಗೆ ಸಾಧ್ಯವಿಲ್ಲ: ಗೌರವ್ ಗೊಗೊಯ್

ಲೋಕಸಭೆಯಲ್ಲಿ 'ವಂದೇ ಮಾತರಂ' ಚರ್ಚೆ: ಸರ್ಕಾರ, ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ತೀವ್ರ ಕಿಡಿ!

ಇಂದು 500 Indigo ವಿಮಾನ ಹಾರಾಟ ರದ್ದು: ನಾವು ಹಗುರವಾಗಿ ಪರಿಗಣಿಸಲ್ಲ... ಇಂಡಿಗೋ ಬಿಕ್ಕಟ್ಟಿನ ಬಗ್ಗೆ ಕೇಂದ್ರ ಸಚಿವರ ಎಚ್ಚರಿಕೆ!

ಮಹಾರಾಷ್ಟ್ರ: ಫಡ್ನವೀಸ್ ಜೊತೆ ಆಪ್ತರಾಗಿರುವ ಮಹಾಯುತಿ ಮಿತ್ರಪಕ್ಷದ 22 ಶಾಸಕರು ಪಕ್ಷ ತೊರೆಯಲು ಸಜ್ಜು- ಆದಿತ್ಯ ಠಾಕ್ರೆ!

WB ಖರೀದಿಗೆ Netflix ಡೀಲ್ ಬಗ್ಗೆ ಟ್ರಂಪ್ ಅಪಸ್ವರ; ಸರ್ಕಾರದಿಂದ ಅನುಮೋದನೆಗೆ ಕೊಕ್ಕೆ ಸೂಚನೆ: ಏಕೆಂದರೆ...

SCROLL FOR NEXT