ಸಿ ಟಿ ರವಿ 
ರಾಜ್ಯ

ರಾಜ್ಯದಲ್ಲೂ ಮತಾಂತರ ನಿಷೇಧ ಕಾಯ್ದೆ ಜಾರಿ: ಸಚಿವ ಸಿ.ಟಿ. ರವಿ

ಕರ್ನಾಟಕ ರಾಜ್ಯದಲ್ಲೂ ಶೀಘ್ರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಹೇಳಿದ್ದಾರೆ.

ಬೆಂಗಳೂರು: ಕರ್ನಾಟಕ ರಾಜ್ಯದಲ್ಲೂ ಶೀಘ್ರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಹೇಳಿದ್ದಾರೆ.

ಈಕುರಿತಂತೆ ಟ್ವೀಟ್ ಮಾಡಿರುವ ಸಚಿವ ಸಿಟಿ ರವಿ, 'ಅಲಹಾಬಾದ್ ಹೈಕೋರ್ಟ್ ಆದೇಶದಂತೆ, ಕರ್ನಾಟಕ ಸರ್ಕಾರ ಕೂಡ ವಿವಾಹದ ಉದ್ದೇಶಕ್ಕಾಗಿ ಮತಾಂತರವನ್ನು ನಿಷೇಧಿಸುವ ಕಾನೂನನ್ನು ಜಾರಿಗೆ ತರಲಿದೆ. ಜಿಹಾದಿಗಳು ನಮ್ಮ ಸಹೋದರಿಯರ ಘನತೆಯನ್ನು ಹಾಳು ಮಾಡುವಾಗ ನಾವು  ಮೌನವಾಗಿರುವುದಿಲ್ಲ. ಮತಾಂತರದ ಕೃತ್ಯದಲ್ಲಿ ಭಾಗಿಯಾಗಿರುವವರಿಗೆ ಕಠಿಣ ಮತ್ತು ತ್ವರಿತ ಶಿಕ್ಷೆ ವಿಧಿಸಬೇಕಾಗಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್ , ಕೇವಲ ಮದುವೆ ಉದ್ದೇಶಕ್ಕಾಗಿ ಮತಾಂತರ ಆಗುವುದನ್ನು ಒಪ್ಪಲಾಗದು ಎಂದು ತೀರ್ಪು ನೀಡಿತ್ತು. ತಮ್ಮ ಮದುವೆ ಬಳಿಕ ಮೂರು ತಿಂಗಳ ರಕ್ಷಣೆ ನೀಡುವಂತೆ ಮನವಿ ಮಾಡಿದ ಜೋಡಿಯೊಂದರ ಅರ್ಜಿಗೆ ಮಧ್ಯಪ್ರವೇಶಿಸಲು ನಿರಾಕರಿಸುತ್ತಾ ಕೋರ್ಟ್ ಈ ತೀರ್ಪು  ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT