ರಾಜ್ಯ

ಸೇತುವೆ ಮೇಲಿಂದ ಆಳಕ್ಕೆ ಬಿದ್ದ ಕಾರು: ಇಬ್ಬರು ಪ್ರಯಾಣಿಕರು ಸಾವು

Srinivasamurthy VN

ಕಾರವಾರ: ಸೇತುವೆಯಿಂದ ಸುಮಾರು 20 ಅಡಿ ಆಳಕ್ಕೆ ಕಾರೊಂದು ಬಿದ್ದು ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಲಂಡನ್ ಬ್ರಿಜ್ ಬಳಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಮೃತರನ್ನು ಚಿಕ್ಕಮಗಳೂರು ಮೂಲದ ಕಿರಣ್ (28) ಹಾಗೂ ರಾಕೇಶ್ ಸಿ.ಆರ್ (28) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಅಂಕೋಲಾದಿಂದ ಗೋವಾ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಈ ವೇಳೆ ಕಾರವಾರದ ಲಂಡನ್ ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಮರಿಗೆ ಉರುಳಿಬಿದ್ದು ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಕಾರವಾರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

SCROLL FOR NEXT