ದೀಪಾವಳಿ ಆಚರಣೆ 
ರಾಜ್ಯ

ಪಟಾಕಿ ಹೊಗೆಯಿಂದ ಕೊರೋನಾ ಹೆಚ್ಚು ಹರಡುವ ಸಾಧ್ಯತೆ: ಸಚಿವ ಡಾ. ಕೆ.ಸುಧಾಕರ್

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹೊಗೆಯಿಂದ ಕೊರೊನಾ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಈ ಸಂಬಂಧ ವೈದ್ಯಕೀಯ ತಜ್ಞರೇ ಶಂಕೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹೊಗೆಯಿಂದ ಕೊರೊನಾ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಈ ಸಂಬಂಧ ವೈದ್ಯಕೀಯ ತಜ್ಞರೇ ಶಂಕೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚಿಸಿದ್ದು ಪಟಾಕಿ ನಿಷೇಧ ಮಾಡಬೇಕೇ ಬೇಡವೇ ಎಂಬ ಬಗ್ಗೆ ನಾಳೆಯೊಳಗೆ ತಜ್ಞರ ಸಮಿತಿ ವರದಿ ನೀಡಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಧಾಕರ್, ರಾಜ್ಯದಲ್ಲಿ 15,654 ಜನರನ್ನು ಸಮೀಕ್ಷೆ ಮಾಡಲಾಗಿದೆ. ಈಗಾಗಲೇ ಕೋವಿಡ್ ಬಂದು ಗುಣಮುಖರಾಗಿರುವವರ ಸರಾಸರಿ ಶೇಕಡಾ 16.4 ರಷ್ಟಿದೆ. ಮುಂಬೈ, ಪುಣೆ ಮತ್ತು ತಮಿಳುನಾಡಿನಲ್ಲಿ ಹೆಚ್ಚಿದೆ. ಸಕ್ರಿಯ ಸೋಂಕಿತರ ಪ್ರಮಾಣ ಶೇಕಡಾ 12.7 ರಷ್ಟಿದೆ. ಎರಡೂ ಸೇರಿ ಶೇಕಡ 27.3.ಮರಣ ಪ್ರಮಾಣ ಶೇಕಡಾ 0.05 ಮಾತ್ರ ಇದೆ ಮುಂಬೈ 0.10 ಇದೆ.ದೆಹಲಿ 0.09 ಇದೆ.ರಾಜ್ಯದ 28 ಜಿಲ್ಲೆಗಳಲ್ಲಿ ಸಿರೋ ಸರ್ವೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿಯೂ ಇದೇ ರೀತಿ ಸರ್ವೆ ಮಾಡಲಾಗಿತ್ತು. ಆದರೆ ಅಲ್ಲಿ ಕೇವಲ‌ ಮೆಟ್ರೋಪಾಲಿಟನ್ ಸಿಟಿ ಗಳಲ್ಲಿ ಸರ್ವೆ ಮಾಡಲಾಗಿತ್ತು.ಆದರೆ ನಮ್ಮ ರಾಜ್ಯದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಮಾಡಲಾಗಿದೆ. ಮಾಡರೇಟ್ ರಿಸ್ಕ್ ಮತ್ತು ಹೈ ರಿಸ್ಕ್ ಇರುವ ಎರಡೂ ವಿಭಾಗಗಳ ಸೋಂಕಿತರ ಸರ್ವೆ ಮಾಡಲಾಗಿದೆ ಎಂದರು.

ಡಿಸೆಂಬರ್ ಅಂತ್ಯದಲ್ಲಿ ಹಾಗು ಫೆಬ್ರವರಿ ಮಾರ್ಚ್ ಗೆ ಇನ್ನು ಎರಡು ಹಂತದ ಸರ್ವೆ ಮಾಡಿಸಲಾಗುತ್ತದೆ. ಬಳ್ಳಾರಿ ಮತ್ತು ಬೆಂಗಳೂರು ನಗರದಲ್ಲಿ ಸೋಂಕಿನ‌ ಪ್ರಮಾಣ ಹೆಚ್ಚಿದೆ. ಅದರಲ್ಲಿಯೂ ಬೆಂಗಳೂರು ಪಶ್ಚಿಮ ವಿಭಾಗದಲ್ಲಿ ಶೇ.45 ಹಾಗು ದಕ್ಷಿಣ ವಿಭಾಗದಲ್ಲಿ ಶೇಕಡಾ 39ರಷ್ಟು ಸೋಂಕಿನ ಪ್ರಮಾಣ ಇದೆ ಎಂದು ಸಚಿವರು ವಿವರಿಸಿದರು.

ಮೈಸೂರು ದಸರಾವನ್ನು ಸರಳವಾಗಿ ಆಚರಿಸಲಾಗಿದೆ. ಅದೇ ಮಾದರಿಯಲ್ಲಿ ಸಂಪ್ರದಾಯಗಳಿಗೆ ತೊಂದರೆಯಾಗದಂತೆ ಸರಳ ರೀತಿಯಲ್ಲಿ ಹಬ್ಬಗಳ ಆಚರಣೆಗೆ ಅವಕಾಶ ಕೊಡಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ದಸರಾ ಹಾಗು ಉಪಚುನಾವಣೆ ನಡೆದ ಆರ್ ಆರ್ ನಗರ ಮತ್ತು ಶಿರಾದಲ್ಲಿ ರಾಂಡಮ್ ಟೆಸ್ಟ್ ಮಾಡಲು ಉದ್ದೇಶಿಸಲಾಗಿದೆ ಎಂದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

SCROLL FOR NEXT