ರಾಜ್ಯ

ಉಡುಪಿ: ಸಿಎಂ ಬಿಎಸ್‌ವೈ ಹೆಸರಿನಲ್ಲಿ ನಕಲಿ ಇ-ಮೇಲ್ ಖಾತೆ ತೆರೆದವನ ವಿರುದ್ಧ ದೂರು ದಾಖಲು

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವರ ಹೆಸರಿನಲ್ಲಿ ನಕಲಿ ಈ-ಮೇಲ್ ಖಾತೆ ತೆರೆದ ದುಷ್ಕರ್ಮಿಯ ವಿರುದ್ಧ ಬುಧವಾರ ಪೊಲೀಸರಿಗೆ ದೂರು ನೀಡಲಾಗಿದೆ.

ಉಡುಪಿ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವರ ಹೆಸರಿನಲ್ಲಿ ನಕಲಿ ಈ-ಮೇಲ್ ಖಾತೆ ತೆರೆದ ದುಷ್ಕರ್ಮಿಯ ವಿರುದ್ಧ ಬುಧವಾರ ಪೊಲೀಸರಿಗೆ ದೂರು ನೀಡಲಾಗಿದೆ.

ಅಪರಿಚಿತ ವ್ಯಕ್ತಿಯೊಬ್ಬ cm@karnataka.gov.in ಹೆಸರಿನಿಂದ ಖಾತೆ ತೆರೆದು ಮಣಿಪಾಲದ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ನ ಡೈರೆಕ್ಟರ್ ಹಾಗೂ ರಿಜಿಸ್ಟಾರ್ ಆದ ಡಾ.ನಾರಾಯಣ್ ಸಭಾಹಿತ್ ಅವರಿಗೆ ಈ-ಮೇಲ್ ಕಳುಹಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸರ ಪ್ರಕಾರ ಮೇಲ್ ನಲ್ಲಿ ಹೀಗಿದೆ- “ಕಾಲೇಜುಗಳನ್ನು ಪುನಃ ತೆರೆಯುವ ಮಾಹೆ ಯೋಜನೆಗೆ ಸಂಬಂಧಿಸಿದಂತೆ ನಾಡಿನಾದ್ಯಂತಪೋಷಕರು ಮತ್ತು ವಿದ್ಯಾರ್ಥಿಗಳಿಂದ ಬಂದ ದೂರುಗಳಿಗೆ ಸಂಬಂಧಿಸಿದಂತೆ ನಾವು ಹಲವಾರು ಇಮೇಲ್‌ಗಳನ್ನು ಸ್ವೀಕರಿಸಿದ್ದೇವೆ. ಈಗಿನ ಪರಿಸ್ಥಿತಿ ನವೆಂಬರ್ / ಡಿಸೆಂಬರ್-2020 ರಲ್ಲಿ ಕಾಲೇಜುಗಳನ್ನು ತೆರೆಯಲು ಸೂಕ್ತವಲ್ಲ. 2 ನೇ ಜನವರಿ-2021 ರಂದು ಅಥವಾ ಅದಕ್ಕೂ ಮೊದಲು ಯಾವುದೇ ಕಾಲೇಜುಗಳನ್ನು ತೆರೆಯಲು ಅನುಮತಿ ಇಲ್ಲ ಎಂದು ಮಾಹೆ ಆಡಳಿತ ಮಂಡಳಿಗೆ ಅರಿವು ಮೂಡಿಸುವುದು ಈ ಮೇಲ್ ಉದ್ದೇಶವಾಗಿದೆ. ಅಲ್ಲದೆ 2 ನೇ ಜನವರಿ-2021 ರ ನಂತರ ಸಹ, ನೀವು ಕಾಲೇಜುಗಳನ್ನು ಮತ್ತೆ ತೆರೆಯಲು ಯೋಜಿಸುತ್ತಿದ್ದರೆ, ನೀವು ಪೋಷಕರ ಒಪ್ಪಿಗೆ ಪಡೆಯಬೇಕು .

ನಕಲಿ ಈ-ಮೇಲ್ ಐಡಿ ರಚಿಸಿದವನನ್ನು ಪತ್ತೆ ಹಚ್ಚಿಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೈಬರ್ ಪೊಲೀಸರಿಗೆ ದೂರುದಾರ ಡಾ.ನಾರಾಯಣ್ ಸಭಾಹಿತ್ ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT