ಬಿನೀಶ್ ಕೊಡಿಯೇರಿ 
ರಾಜ್ಯ

ಮುಖ್ಯ ನ್ಯಾಯಮೂರ್ತಿಗಳು, ಹಿರಿಯ ಅಡ್ವೊಕೇಟ್ ಭೇಟಿ ಮಾಡಿದ್ದಕ್ಕೆ ಬಿನೀಶ್ ಕೊಡಿಯೇರಿ ಪರ ವಕೀಲರ ಕ್ಷಮಾಪಣೆ

ಡ್ರಗ್ ದಂಧೆಯಲ್ಲಿ ಹಣ ಹೂಡಿಕೆ ಮಾಡಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯದ ಬಂಧನದಲ್ಲಿರುವ ಬಂಧನದಲ್ಲಿರುವ ಬಿನೀಶ್ ಕೊಡಿಯಾರಿ ಪರ ಹಿರಿಯ ವಕೀಲರು ಕರ್ನಾಟಕ ಹೈಕೋರ್ಟ್ ಮುಂದೆ ಕ್ಷಮೆ ಕೇಳಿದ್ದಾರೆ.

ಬೆಂಗಳೂರು: ಡ್ರಗ್ ದಂಧೆಯಲ್ಲಿ ಹಣ ಹೂಡಿಕೆ ಮಾಡಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯದ ಬಂಧನದಲ್ಲಿರುವ ಬಂಧನದಲ್ಲಿರುವ ಬಿನೀಶ್ ಕೊಡಿಯಾರಿ ಪರ ಹಿರಿಯ ವಕೀಲರು ಕರ್ನಾಟಕ ಹೈಕೋರ್ಟ್ ಮುಂದೆ ಕ್ಷಮೆ ಕೇಳಿದ್ದಾರೆ.

ಅರ್ಜಿ ಸಲ್ಲಿಕೆಗೆ ಮೊದಲೇ ಅಡ್ವೊಕೇಟ್ ಅವರು ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಮತ್ತು ಅತ್ಯಂತ ಹಿರಿಯ ವಕೀಲರ ನಿವಾಸಕ್ಕೆ ಭೇಟಿ ನೀಡಿದ್ದಕ್ಕೆ ಸಂಬಂಧಪಟ್ಟಂತೆ ಕ್ಷಮೆ ಕೇಳಿದ್ದಾರೆ.

ಆರೋಪಿಯನ್ನು ಭೇಟಿ ಮಾಡಲು ವಕೀಲರಿಗೆ ಅವಕಾಶ ನೀಡುವಂತೆ ಜಾರಿ ನಿರ್ದೇಶನಾಲಯಕ್ಕೆ ಆದೇಶ ನೀಡುವಂತೆ ಕೋರಲು ಅಡ್ವೊಕೇಟ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು. ಬಿನೀಶ್ ಅರ್ಜಿ ಸಲ್ಲಿಕೆ ವಿಚಾರಣೆ ನಡೆಸುತ್ತಿದ್ದ ವೇಳೆ ನಿನ್ನೆ ಜಸ್ಟೀಸ್ ಸೂರಜ್ ಗೋವಿಂದರಾಜ್ ಅವರು ಈ ವಿಷಯವನ್ನು ಪ್ರಸ್ತಾಪಿಸಿ ಆಕ್ಷೇಪ ವ್ಯಕ್ತಪಡಿಸಿದರು. ಆಗ ಹಿರಿಯ ವಕೀಲರು ತಮ್ಮ ನಡೆ ತಪ್ಪಾಗಿದೆ ಎಂದು ಕ್ಷಮೆ ಕೇಳಿದರು. ಬಿನೀಶ್ ಕೇರಳದ ಸಿಪಿಎಂ ಕಾರ್ಯದರ್ಶಿ ಕೊಡಿಯಾರಿ ಬಾಲಕೃಷ್ಣನ್ ಅವರ ಪುತ್ರ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ