ಹಾಸನಾಂಬ 
ರಾಜ್ಯ

ಕೋವಿಡ್ ಹಿನ್ನಲೆ ಹಾಸನಾಂಬೆ ದೇಗುಲಕ್ಕೆ ಭಕ್ತರಿಗೆ ಪ್ರವೇಶವಿಲ್ಲ, ಆನ್ ಲೈನ್ ದರ್ಶನ ವ್ಯವಸ್ಥೆ!

ಇಂದಿನಿಂದ ಈ ತಿಂಗಳ 16 ರ ವರಗೆ ಹಾಸನಾಂಬೆ ಹಾಗೂ ಸುದ್ದೇಶ್ವರ ಜಾತ್ರಾ ಮಹೋತ್ಸ ನಡೆಯಲಿದ್ದು, ಕೋವಿಡ್ 19 ಹಿನ್ನೆಲೆಯಲ್ಲಿ ಜನ ಸಾಮಾನ್ಯರ ಪ್ರವೇಶ ನಿರ್ಬಂಧಿಸಿದ್ದು, ಯೂ ಟ್ಯೂಬ್ ನಲ್ಲಿ ನೇರ ಪ್ರಸಾರಕ್ಕೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.

ಹಾಸನ: ಇಂದಿನಿಂದ ಈ ತಿಂಗಳ 16 ರ ವರಗೆ ಹಾಸನಾಂಬೆ ಹಾಗೂ ಸುದ್ದೇಶ್ವರ ಜಾತ್ರಾ ಮಹೋತ್ಸ ನಡೆಯಲಿದ್ದು, ಕೋವಿಡ್ 19 ಹಿನ್ನೆಲೆಯಲ್ಲಿ ಜನ ಸಾಮಾನ್ಯರ ಪ್ರವೇಶ ನಿರ್ಬಂಧಿಸಿದ್ದು, ಯೂ ಟ್ಯೂಬ್ ನಲ್ಲಿ ನೇರ ಪ್ರಸಾರಕ್ಕೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.

ವರ್ಷಕ್ಕೆ ಒಮ್ಮೆ ದೀಪಾವಳಿ ಸಂದರ್ಭದಲ್ಲಿ ತೆರೆಯುವ ಹಾಸನಾಂಬೆ ದರ್ಶನ ನಿಷೇಧಿಸಲಾಗಿದೆ. ಆದರೆ ಜನ ಸಾಮಾನ್ಯರಿಗೆ ತೊಂದರೆಯಾಗದಿರಲೆಂದು ಆನ್ ಲೈನ್ ಮೂಲಕ ವೀಕ್ಷಣೆಗೆ ಕ್ರಮ ತೆಗೆದುಕೊಂಡಿದೆ. ಅಲ್ಲದೆ ಹಾಸನ ನಗರದ 10 ಕಡೆ ಎಲ್‌ಇಡಿ ಪರದೆ ಅಳವಡಿಕೆ ಮಾಡಿದ್ದು, ಅಲ್ಲಿ ಭಕ್ತರು ದೇವಿಯ  ದರ್ಶನ ಪಡೆಯಬಹುದು. 

ಗುರುವಾರ 1.30ರ ಸುಮಾರಿಗೆ ದೇವಾಲಯದ ಬಾಗಿಲನ್ನು ತೆರೆಯಲಾಗುತ್ತದೆ. ನವೆಂಬರ್ 5ರಿಂದ 17ರ ತನಕ ಈ ಬಾರಿ ದೇವಾಲಯ ಬಾಗಿಲು ತೆರೆದಿರುತ್ತದೆ. ಈಗಾಗಲೇ ಜಿಲ್ಲಾಡಳಿತ ಜಿಲ್ಲಾ ಖಜಾನೆಯಿಂದ ಒಡವೆಗಳನ್ನು ದೇವಾಲಯಕ್ಕೆ ಕಳುಹಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ದೇವಿಯ ಭಕ್ತರು  http://hasanambalive2020.com/Home.aspx ಲಿಂಕ್ ಮೂಲಕ ದೇವಾಲಯದ ಪೂಜೆ, ದರ್ಶನವನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ಹಾಸನಾಂಬೆ ಜಾತ್ರೆಯ ಅಂಗವಾಗಿ ನಗರದಲ್ಲಿ ಹಲವಾರು ವ್ಯವಸ್ಥೆಗಳನ್ನು ಮಾಡಲಾಗಿದೆ. ವರ್ಷಕ್ಕೊಮ್ಮೆ  ದೇವಾಲಯದ ಬಾಗಿಲನ್ನು ತೆರೆಯಲಾಗುತ್ತದೆ. ಆದರೆ, ಕೋವಿಡ್ ಪರಿಸ್ಥಿತಿ ಕಾರಣ ಭಕ್ತರಿಗೆ ಈ ಬಾರಿ ದರ್ಶನ ಇಲ್ಲವಾಗಿದೆ. 

ಈ ಬಗ್ಗೆ ಮಾಹಿತಿ ನೀಡಿರುವ ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು, 'ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮೊದಲ ದಿನ ಮತ್ತು ಕೊನೆಯ ದಿನ ಜನಪ್ರತಿನಿಧಿಗಳು, ವಿಶೇಷ ಗಣ್ಯರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ" ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!