ರಾಜ್ಯ

ಬೈಕ್ ಗೆ ಟೆಂಪೋ ಟ್ರಾವೆಲರ್ ಡಿಕ್ಕಿ: ಇಬ್ಬರು ಸಾವು

Nagaraja AB

ಚಾಮರಾಜನಗರ: ಬೈಕ್ ಹಾಗೂ ಟೆಂಪೋಟ್ರಾವೆಲರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಯಳಂದೂರು ತಾಲೂಕಿನ ಮದ್ದೂರಿನಲ್ಲಿ ತಡರಾತ್ರಿ ನಡೆದಿದೆ.

ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಆನಂದ್(28)  ಮತ್ತು ಆರ್.ಎಸ್.ದೊಡ್ಡಿ ಗ್ರಾಮದ  ಸಿದ್ದರಾಜು(28) ಮೃತ ದುರ್ದೈವಿಗಳು. 

ಮೃತರು ಎಳನೀರು ವ್ಯಾಪಾರಿಗಳಾಗಿದ್ದು   ವ್ಯವಹಾರ ಕುದುರಿಸಿ ಊರಿಗೆ ತೆರಳ ಬೇಕಾದರೆ ಬೆಂಗಳೂರಿನಿಂದ ಚಾಮರಾಜನಗರಕ್ಕೆ ಬರುತ್ತಿದ್ದ ಟೆಂಪೋ ಟ್ರಾವೆಲ್ಲರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಟೆಂಪೋ ಟ್ರಾವೆಲ್ಲರ್ ನಲ್ಲಿ  8 ಮಂದಿ ಇದ್ದರು ಎಂದು ತಿಳಿದುಬಂದಿದ್ದು,  ಘಟನೆ ನಡೆದ ಕೂಡಲೇ ಚಾಲಕ ಪರಾರಿಯಾಗಿದ್ದಾನೆ. 
ಬೈಕ್ ಸವಾರ ಆನಂದ್ ಸ್ಥಳದಲ್ಲೇ ಮೃತಪಟ್ಟರೇ ಸಿದ್ದರಾಜು ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾನೆ. ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ಗುಳಿಪುರ ನಂದೀಶ್

SCROLL FOR NEXT