ರಾಜ್ಯ

ಮಹಾದೇವ ಸಾಹುಕಾರ್ ಮೇಲೆ ಗುಂಡಿನ ದಾಳಿ: ಮತ್ತೆ ಐವರ ಬಂಧನ

Raghavendra Adiga

ವಿಜಯಪುರ: ಭೀಮಾತೀರದ ರೌಡಿ ಶೀಟರ್ ಮಹಾದೇವ ಸಾಹುಕಾರ್ ಭೈರಗೊಂಡ ಮೇಲೆ ನಡೆದಿದ್ದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಐವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ತಿಳಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಅತಾಲಟ್ಟಿ ಗ್ರಾಮದ ಯಾಶೀನ್ ರಮಜಾನಸಾಬ್ ದಂದರಗಿ (25), ಕರೆಪ್ಪ ಊರ್ಫ್ ಗೂಳಿ ಮಹಾದೇವ ಸೊನ್ನದ (25), ಸಿದ್ದು ಊರ್ಫ್ ಸಿದರಾಯ ಬಸಪ್ಪ ಬೊಮ್ಮನಜೋಗಿ (34), ಅಲಿಯಾಬಾದ ಗ್ರಾಮದ ಸಂಜು ಊರ್ಫ್ ಸಚಿನ ತುಕಾರಾಮ ಮಾನವರ (28) ಹಾಗೂ ಚಡಚಣದ ರವಿ ಧರೆಪ್ಪ ಬಂಡಿ (20) ಎಂಬುವವರನ್ನು ಬಂಧಿಸಲಾಗಿದೆ ಎಂದರು.

ಬಂಧಿತರಿಂದ 2 ಕಂಟ್ರಿ ಪಿಸ್ತೂಲ್, 5 ಜೀವಂತ ಗುಂಡು, 4 ಮೊಬೈಲ್, 1 ಆಟೋ ರಿಕ್ಷಾ, 1 ಮಚ್ಚು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು. 

ಇಲ್ಲಿಯವರೆಗೆ ಒಟ್ಟೂ ಏಳು ಮಂದಿಯನ್ನು ಬಂಧಿಸಲಾಗಿದ್ದು ತನಿಖೆ ಮುಂದುವರಿದಿದೆ.
 

SCROLL FOR NEXT