ಸಂಪತ್ ರಾಜ್ 
ರಾಜ್ಯ

ಬೆಂಗಳೂರು ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಪತ್ತೆಗಾಗಿ ಶೋಧ ತೀವ್ರ, ಶೀಘ್ರದಲ್ಲೇ ಆಂಧ್ರಕ್ಕೆ ಸಿಸಿಬಿ ತಂಡ

ಡಿಜೆ ಹಳ್ಳಿ  ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣ ಪ್ರಮುಖ ಆರೋಪಿಯಾಗಿರುವ ಮಾಜಿ ಮೇಯರ್ ಸಂಪರ್ ರಾಜ್ ಪತ್ತೆಗಾಗಿ ಶೋಧ ಕಾರ್ಯ ತೀವ್ರಗೊಂಡಿದ್ದು, ಶೀಘ್ರದಲ್ಲಿಯೇ ಸಿಸಿಬಿ ಪೊಲೀಸರು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ಬೆಂಗಳೂರು: ಡಿಜೆ ಹಳ್ಳಿ  ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣ ಪ್ರಮುಖ ಆರೋಪಿಯಾಗಿರುವ ಮಾಜಿ ಮೇಯರ್ ಸಂಪರ್ ರಾಜ್ ಪತ್ತೆಗಾಗಿ ಶೋಧ ಕಾರ್ಯ ತೀವ್ರಗೊಂಡಿದ್ದು, ಶೀಘ್ರದಲ್ಲಿಯೇ ಸಿಸಿಬಿ ಪೊಲೀಸರು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ಕೊರೋನಾ ಸೋಂಕು ಕಾರಣ ನೀಡಿ ಆಸ್ಪತ್ರೆಯಲ್ಲಿಯೇ ಉಳಿದಿದ್ದ ಸಂಪತ್ ರಾಜ್ ಅವರು ರಾತ್ರೋರಾತ್ರಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ನಾಪತ್ತೆಯಾಗಿದ್ದಾರೆ. ಈಗಾಗಲೇ ಸಿಸಿಬಿ ಪೊಲೀಸರು ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೆ, ಸಂಪತ್ ರಾಜ್ ಕುರಿತು ಯಾವುದೇ ಸುಳಿವುಗಳು ಪತ್ತೆಯಾಗಿರಲಿಲ್ಲ. 

ಸಂಪತ್ ರಾಜ್ ಪತ್ತೆಗಾಗಿ ಈಗಾಗಲೇ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಒಂದು ತಂಡ ಕೇರಳದಲ್ಲಿ ಹುಡುಕಾಟ ನಡೆಸಿದೆ. ಮತ್ತೊಂದು ತಂಡ ಮಹಾರಾಷ್ಟ್ರದಲ್ಲಿ ಹುಡುಕಾಟ ನಡೆಸಿದೆ. ಈಗಾಗಲೇ ಪ್ರಕರಣ ಸಂಬಂಧ ಸಂಪತ್ ರಾಜ್ ಅವರ ಸಂಬಂಧಿಕರನ್ನೂ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. 

ತಾಂತ್ರಿಕ ತಂಡ ಸಂಪತ್ ರಾಜ್ ಅವರ ಎಲ್ಲಾ ಚಟುವಟಿಕೆಗಳ ಮೇಲೆ ಕಣ್ಗಾವಲಿರಿಸಿದೆ. ಪ್ರತೀನಿತ್ಯ ಒಂದೊಂದು ರಾಜ್ಯಕ್ಕೆ ಸಂಪತ್ ರಾಜ್ ಪ್ರಯಾಣಿಸುತ್ತಿರುವುದು ಕಂಡು ಬಂದಿದೆ ಎಂದು ಸಿಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ನಡುವೆ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು, ಸಂಪತ್ ರಾಜ್ ಅವರನ್ನು ಸದ್ಯದಲ್ಲಿಯೇ ಬಂಧಿಸುತ್ತೇವೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ಬಂಧನಕ್ಕೆ ಈಗಾಗಲೇ 4 ತಂಡಗಳು ಹುಡುಕಾಟ ನಡೆಸುತ್ತಿವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!