ರಾಜ್ಯ

ಡ್ರಗ್ಸ್ ಪ್ರಕರಣ: ಬಿನೀಶ್ ಕೊಡಿಯೇರಿ ಇಡಿ ಕಸ್ಟಡಿ ನಾಲ್ಕು ದಿನ ವಿಸ್ತರಣೆ

ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿಯವರನ್ನು ಕರ್ನಾಟಕ ನ್ಯಾಯಾಲಯ ನವೆಂಬರ್ 11 ರವರೆಗೆ ಜಾರಿ ನಿರ್ದೇಶನಾಲಯ (ಇಡಿ) ವಶಕ್ಕೆ ಒಪ್ಪಿಸಿದೆ.

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿಯವರನ್ನು ಕರ್ನಾಟಕ ನ್ಯಾಯಾಲಯ ನವೆಂಬರ್ 11 ರವರೆಗೆ ಜಾರಿ ನಿರ್ದೇಶನಾಲಯ (ಇಡಿ) ವಶಕ್ಕೆ ಒಪ್ಪಿಸಿದೆ.

ವಾರದ ಆರಂಭದಲ್ಲಿ, ಇಡಿ 25 ಗಂಟೆಗಳಿಗಿಂತ ಹೆಚ್ಚು ಕಾಲ ಬಿನೀಶ್ ಕೊಡಿಯೇರಿ ಅವರ ನಿವಾಸದ ಮೇಲೆ ದಾಳಿ ನಡೆಸಿದ ನಂತರ ಬೆಂಗಳೂರು ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ತಡೆ ಕಾಯ್ದೆಯನ್ವಯ ಅವರನ್ನು ಬಂಧಿಸಿದೆ.

ಆರ್ಥಿಕ ಅಪರಾಧಗಳ ನಿಯಂತ್ರಕ ಇಡಿ ಈ ಹಿಂದೆ ಬಂಧಿಸಿದ ಡ್ರಗ್ ಪೆಡ್ಲರ್ ಮೊಹಮ್ಮದ್ ಅನೂಪ್ ತನ್ನವಿಚಾರಣೆಯ ಸಮಯದಲ್ಲಿ ಅಂತರ-ರಾಜ್ಯ ಮಾದಕವಸ್ತು, ಡ್ರಗ್ಸ್ ಮಾರಾಟ ಮತ್ತು ಖರೀದಿಯಲ್ಲಿ ಪಾಲ್ಗೊಳ್ಳುತ್ತಿದ್ದೇನೆ ಮತ್ತು ಬಿನೀಶ್ ಅವರೊಂದಿಗೆ ಕಟ ಸಂಬಂಧ ಹೊಂದಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಹೇಳಿದೆ.  "ತನಿಖೆಯ ಸಮಯದಲ್ಲಿ, ಮೊಹಮ್ಮದ್ ಅನೂಪ್ ಬಿನೀಶ್ ಮತ್ತು ಅವರ ಎಲ್ಲಾ ಹಣಕಾಸಿನ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದ.ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ .

ತನಿಖೆಯು ಅನೂಪ್ ವಿವಿಧ ಬ್ಯಾಂಕ್ ಖಾತೆಗಳನ್ನು ಹೊಂದಿದ್ದನ್ನು ಬಹಿರಂಗಪಡಿಸಿದೆ ಮತ್ತು ಅಪಾರ ಪ್ರಮಾಣದ ಹಣವನ್ನು ಹಲವಾರು ಖಾತೆಗಳಿಗೆ ವರ್ಗಾಯಿಸಲು ಮತ್ತು ವ್ಯವಹಾರ ನಡೆಸಲು ತೊಡಗಿದ್ದ ಆದಾಗ್ಯೂ, ಅನೂಪ್ ಈ ನಗದು ಮತ್ತು ನಿಧಿ ವಹಿವಾಟುಗಳನ್ನು ವಿವರಿಸಲು ಸಾಧ್ಯವಾಗಲಿಲ್ಲ "ಫಂಡ್ ಟ್ರಯಲ್ ತನಿಖೆಯಿಂದ ಬಿನೀಶ್ ಅವರ ಖಾತೆಗಳಲ್ಲಿ ಅಪಾರ ಪ್ರಮಾಣದ ಅಕ್ರಮಹಣವನ್ನು ನಿಯಮಿತವಾಗಿ ಜಮಾ ಮಾಡಲಾಗುತ್ತಿದೆ ಎಂದು ದೃಢಪಡಿಸಿದೆ.ವುಗಳಿಗೆ ಮುಂಚಿತವಾಗಿ ಕೇರಳದಲ್ಲಿ ದೊಡ್ಡ ನಗದು ಠೇವಣಿ ಇದೆ"

ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್, 1985 ರ ವಿವಿಧ ವಿಭಾಗಗಳ ಅಡಿಯಲ್ಲಿ ನೋಂದಾಯಿಸಲಾದ ಬೆಂಗಳೂರಿನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೋಂದಾಯಿಸಿದ ಎಫ್ಐಆರ್ ಆಧರಿಸಿ ಮೊಹಮ್ಮದ್ ಅನೂಪ್ ಮತ್ತು ಇತರರ ವಿರುದ್ಧ ಇಡಿ ತನಿಖೆಯನ್ನು ಪ್ರಾರಂಭಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!