ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ತಡೆಗಟ್ಟುವಿಕೆಗೆ ಕ್ರಮ: ರೆಸ್ಟೊರೆಂಟ್ ಗಳಲ್ಲಿ ಸಿಬ್ಬಂದಿಗಳ ತಪಾಸಣೆಗೆ ಮುಂದಾದ ಬಿಬಿಎಂಪಿ 

ಹೊಟೇಲ್ ಮತ್ತು ರೆಸ್ಟೋರೆಂಟ್ ಗಳಿಗೆ ಭೇಟಿ ನೀಡುವ ಗ್ರಾಹಕರು ಕೊರೋನಾ ಸೋಂಕಿನಿಂದ ರಕ್ಷಿಸಿಕೊಳ್ಳಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ರೆಸ್ಟೋರೆಂಟ್ ಗಳ ಮಾಲೀಕರು ಮತ್ತು ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲಿದೆ.

ಬೆಂಗಳೂರು: ಹೊಟೇಲ್ ಮತ್ತು ರೆಸ್ಟೋರೆಂಟ್ ಗಳಿಗೆ ಭೇಟಿ ನೀಡುವ ಗ್ರಾಹಕರು ಕೊರೋನಾ ಸೋಂಕಿನಿಂದ ರಕ್ಷಿಸಿಕೊಳ್ಳಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ರೆಸ್ಟೋರೆಂಟ್ ಗಳ ಮಾಲೀಕರು ಮತ್ತು ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲಿದೆ.

ಕಳೆದ ಜೂನ್ ನಲ್ಲಿ ಜನರು ಹೆಚ್ಚು ಸೇರುವ ಪ್ರದೇಶಗಳಾದ ಮಾರುಕಟ್ಟೆ ಪ್ರದೇಶಗಳು, ಸೂಪರ್ ಮಾರ್ಕೆಟ್ ಗಳು, ವೈದ್ಯಕೀಯ ಕೇಂದ್ರಗಳು ಮತ್ತು ರೆಸ್ಟೋರೆಂಟ್ ಗಳಲ್ಲಿ ಪರೀಕ್ಷೆ ನಡೆಸಲು ಯೋಜನೆ ರೂಪಿಸಿತ್ತು. ಆಗಸ್ಟ್ ನಲ್ಲಿ ಪರೀಕ್ಷಾ ಕ್ಯಾಂಪ್ ಗಳನ್ನು ಸ್ಥಾಪಿಸಲಾಯಿತು. ನಂತರ ಇದನ್ನು ರೆಸ್ಟೋರೆಂಟ್ ಗಳಿಗೆ ಸಹ ವಿಸ್ತರಿಸಲಾಯಿತು.

ಮೂರು ದಿನಗಳ ಹಿಂದೆ ಅಂದರೆ ಕಳೆದ ಬುಧವಾರ ರೆಸ್ಟೊರೆಂಟ್ ಗಳಿಗೆ ಬಂದ ಬಿಬಿಎಂಪಿ ಸಿಬ್ಬಂದಿ ನಾವು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು. ಇದೊಂದು ಉತ್ತಮ ಅಭಿಯಾನ. ರೆಸ್ಟೊರೆಂಟ್ ಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನರು ಬರುವುದರಿಂದ ನಮಗೆ ಸೋಂಕು ತಗಲದೆ ಸುರಕ್ಷಿತವಾಗಿರಬೇಕು ಎನ್ನುತ್ತಾರೆ ಮ್ಯೂಸಿಯಂ ರಸ್ತೆಯಲ್ಲಿರುವ ದಿ ಒನ್ಲಿ ಪ್ಲೇಸ್ ನ ಮಾಲೀಕ ರುಫ್ಖಾ ಹಸನ್.

ಕೋರಮಂಗಲದಲ್ಲಿ ಬಿಬಿಎಂಪಿ ಕಾರ್ಯಕರ್ತರು 15 ರೆಸ್ಟೊರೆಂಟ್ ಗಳ ಸಿಬ್ಬಂದಿ ಮೇಲೆ ಪರೀಕ್ಷೆ ನಡೆಸಿದ್ದಾರೆ. ಸಿಬ್ಬಂದಿ ಕೊರೋನಾ ಸೋಂಕಿನ ಲಕ್ಷಣ ಹೊಂದಿಲ್ಲದಿದ್ದರೂ ಕೂಡ ಹಲವರಲ್ಲಿ ಪಾಸಿಟಿವ್ ಕಂಡುಬಂದು ಐಸೊಲೇಟ್ ಆಗಿದ್ದಾರೆ. ಒಂದು ಬಾರಿ ಸಿಬ್ಬಂದಿಗೆ ಸೋಂಕು ತಗುಲಿದರೆ ನಂತರ ಅವರನ್ನು ಪ್ರತ್ಯೇಕಿಸಿ ಇಡೀ ಕಚೇರಿಯನ್ನು ಸ್ಯಾನಿಟೈಸ್ ಮಾಡಿ ಪಾಸಿಟಿವ್ ಬಂದವರನ್ನು ಯಾರೆಲ್ಲಾ ಸಂಪರ್ಕಿಸಿದ್ದಾರೆ ಎಂದು ಪತ್ತೆ ಹಚ್ಚುತ್ತೇವೆ. ದೊಡ್ಡ ದೊಡ್ಡ ರೆಸ್ಟೊರೆಂಟ್ ಗಳಲ್ಲಿ ಗ್ರಾಹಕರು ಬುಕ್ಕಿಂಗ್ ಮಾಡಿ ಬರುವುದರಿಂದ ಅವರ ಸಂಪರ್ಕವನ್ನು ಸುಲಭವಾಗಿ ಪತ್ತೆ ಹಚ್ಚಬಹುದು ಎನ್ನುತ್ತಾರೆ ಬಿಬಿಎಂಪಿಯ ಮೊಬೈಲ್ ಟೆಸ್ಟಿಂಗ್ ತಂಡದ ಕಾರ್ಯಕರ್ತ ಮತ್ತು ಸಮನ್ವಯಾಧಿಕಾರಿ ರಾಹುಲ್ ಫ್ರಾನ್ಸಿಸ್. 

ಹೊಟೇಲ್ ಸಿಬ್ಬಂದಿ ಪ್ರತಿ ತಿಂಗಳು ತಪಾಸಣೆಗೆ ಒಳಗಾಗಬೇಕೆಂದು ಸರಕಾರ ಸುತ್ತೋಲೆ ಹೊರಡಿಸಬೇಕು.ಯಾರಾದರೂ ಸೌಖ್ಯವಿಲ್ಲವೆಂದು 3 ದಿನ ರಜೆ ಹಾಕಿ ಕಚೇರಿಗೆ ಬರದೆ ನಂತರ ಬರುವಾಗ ಕೊರೋನಾ ನೆಗೆಟಿವ್ ವರದಿ ತರಬೇಕು. ಹೊಸ ಉದ್ಯೋಗಿಗಳು ಕೆಲಸಕ್ಕೆ ಹಾಜರಾಗುವುದಕ್ಕೆ 72 ಗಂಟೆಗಳ ಮೊದಲು ಕೊರೋನಾ ನೆಗೆಟಿವ್ ವರದಿ ತಂದಿರಬೇಕು ಎನ್ನುತ್ತಾರೆ ಬಿಬಿಎಂಪಿ ಪೂರ್ವ ವಲಯದ ನೋಡಲ್ ಅಧಿಕಾರಿ ಡಾ ಭಾಸ್ಕರ್ ರಾಜ್ ಕುಮಾರ್. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT