ರಾಜ್ಯ

ಬೆಂಗಳೂರು: ಮೂವರು ವಾಹನ ಕಳ್ಳರ ಬಂಧನ, ನಾಲ್ಕು ದ್ವಿಚಕ್ರ ವಾಹನ ವಶ

ಮನೆ ಮುಂದೆ ನಿಲ್ಲಿಸಿದ್ದ ವಾಹನ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ವಿಜಯನಗರ ಪೊಲೀಸರು, 2.69 ಲಕ್ಷ ರೂ.ಮೌಲ್ಯದ 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು:  ಮನೆ ಮುಂದೆ ನಿಲ್ಲಿಸಿದ್ದ ವಾಹನ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ವಿಜಯನಗರ ಪೊಲೀಸರು, 2.69 ಲಕ್ಷ ರೂ.ಮೌಲ್ಯದ 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಮಂಗಮ್ಮನಪಾಳ್ಯ ನಿವಾಸಿ ಜಬೀವುಲ್ಲಾ (19), ಬೊಮ್ಮನಹಳ್ಳಿ ನಿವಾಸಿ ಅಬ್ದುಲ್ ಹಫೀಝ್ (20) ಬಂಧಿತ ಆರೋಪಿಗಳು.

ಆರ್.ಪಿ.ಸಿ ಲೇಔಟ್ ನಲ್ಲಿರುವ ನಿವಾಸಿಯೊಬ್ಬರು ಮಾರ್ಚ್ 30ರಂದು ಅವರ ಮನೆಯ ಮುಂದೆ ನಿಲ್ಲಿಸಿದ್ದ 42000 ರೂ.ಮೌಲ್ಯದ ಟಿವಿಎಸ್ ಸ್ಕೂಟರ್ ಅನ್ನು ಕಳ್ಳರು ಕಳವು ಮಾಡಿದ್ದರು. ಈ ಬಗ್ಗೆ ಅವರು ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. 

ದೂರು ದಾಖಲಿಸಿಕೊಂಡ ಪೋಲೀಸರು ಬೈಕ್​ ಕಳ್ಳರಿಗಾಗಿ ಶೋಧ ಮಾಡಿದಾಗ ಆರೋಪಿಗಳ ಸುಳಿವು ಸಿಕ್ಕಿದೆ. ಬಂಧಿತರು ಶೋಕಿ ಜೀವನಕ್ಕಾಗಿ ಹಣ ಮಾಡುವ ಉದ್ದೇಶದಿಂದ ಬೈಕುಗಳ ಕಳ್ಳತನ ನಡೆಸಿದ್ದರೆಂದು ಹೇಳಲಾಗಿದೆ. ಇವರು ಇದಾಗಲೇ ಕೆಲ ಬೈಕ್ ಗಳ ನಂಬರ್ ಪ್ಲೇಟ್ ಬದಲಿಸಿ ಬೇರೆಡೆ ವ್ಯಾಪಾರ ಮಾಡಿರುವುದೂ ಸಹ ಗೊತ್ತಾಗಿದ್ದು  ಇವರ ವಿರುದ್ಧ ಈ ಹಿಂದೆ ಸಹ ಹಲವಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT