ಪಟಾಕಿ ಮಳಿಗೆಯ ಸಾಂದರ್ಭಿಕ ಚಿತ್ರ 
ರಾಜ್ಯ

ಹಸಿರು ಪಟಾಕಿಗಳ ಮಾರಾಟ 10 ದಿನ ಮಾತ್ರ ಅವಕಾಶ: ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ 

ಈ ಬಾರಿ ದೀಪಾವಳಿಗೆ ಹಸಿರು ಪಟಾಕಿಗಳನ್ನು ಹೊತ್ತಿಸಲು ಅವಕಾಶ ನೀಡಿದ ನಂತರ ಪಟಾಕಿಗಳ ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಬೆಂಗಳೂರು: ಈ ಬಾರಿ ದೀಪಾವಳಿಗೆ ಹಸಿರು ಪಟಾಕಿಗಳನ್ನು ಹೊತ್ತಿಸಲು ಅವಕಾಶ ನೀಡಿದ ನಂತರ ಪಟಾಕಿಗಳ ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಕೋವಿಡ್-19 ಶಿಷ್ಟಾಚಾರದ ಮಧ್ಯೆ, ನವೆಂಬರ್ 7ರಿಂದ 16ರವರೆಗೆ ಮಾತ್ರ ಪಟಾಕಿಗಳ ಮಾರಾಟಕ್ಕೆ ಅವಕಾಶವಿದೆ. ಸರ್ಕಾರದ ಹೊಸ ಮಾರ್ಗಸೂಚಿಯನ್ನು ನಿನ್ನೆ ಬಿಡುಗಡೆಗೊಳಿಸಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ್ ಭಾಸ್ಕರ್, ಜಿಲ್ಲಾಧಿಕಾರಿಗಳು, ಎಸ್ಪಿಗಳು, ಬೆಂಗಳೂರು ಸಿಟಿ ಪೊಲೀಸ್ ಆಯುಕ್ತರು, ಬಿಬಿಎಂಪಿಗಳಿಗೆ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದಾರೆ.

ಪಟಾಕಿಗಳ ಮಾರಾಟವನ್ನು 17 ದಿನಗಳಿಂದ 10 ದಿನಗಳಿಗೆ ಇಳಿಸಿರುವ ರಾಜ್ಯ ಸರ್ಕಾರ, ಅಂಗಡಿಗಳಿಗೆ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಅನುಮತಿ ಕೊಟ್ಟಿದೆ. ಪಟಾಕಿ ಮಾರಾಟಗಾರರು ಮಾರಾಟ ಮಾಡುವ ಸ್ಥಳದಲ್ಲಿ ಸಾಕಷ್ಟು ಗಾಳಿ ಬೆಳಕು ಹೊಂದಿರಬೇಕು, ಅಂಗಡಿಯನ್ನು ಪ್ರತಿದಿನ ಸ್ಯಾನಿಟೈಸ್ ಮಾಡುತ್ತಿರಬೇಕು, ಥರ್ಮಲ್ ಸ್ಕ್ರೀನಿಂಗ್ ಮತ್ತು ಗ್ರಾಹಕರಿಗೆ ಕೈಯನ್ನು ಸ್ಯಾನಿಟೈಸ್ ಮಾಡಿಕೊಳ್ಳುವ ವ್ಯವಸ್ಥೆ ಇಟ್ಟಿರಬೇಕು. ಮಾರಾಟಗಾರರು ಮತ್ತು ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಪಟಾಕಿ ಮಾರುವ ಅಂಗಡಿಗಳ ಮಧ್ಯೆ ಕನಿಷ್ಠ 6 ಮೀಟರ್ ಅಂತರವಿರಬೇಕು ಎಂದು ನಿಯಮ ಹೇಳುತ್ತದೆ.

ಆದರೂ ಕೂಡ ಪಟಾಕಿ ಹಚ್ಚುವ ಸಮಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ, ಜನರು ಸುರಕ್ಷತೆ ಪಾಲಿಸುವುದು ಕಡಿಮೆಯಾಗಬಹುದು ಎಂದು ಸಾರ್ವಜನಿಕ ಆರೋಗ್ಯ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. 

ಇದಕ್ಕಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಸ್ತೃತ ವರದಿಯನ್ನು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಕಳುಹಿಸಿದ್ದಾರೆ. ಪರವಾನಗಿ ನೀಡುವ ಅಧಿಕಾರಿಗಳು ಮತ್ತು ಗ್ರಾಹಕರು ಅನುಮೋದನೆ ಪಡೆದ ಪಟಾಕಿಗಳನ್ನು  ಖಚಿತಪಡಿಸಿಕೊಳ್ಳಲು ಈ ವರ್ಷ ತಂತ್ರಜ್ಞಾನ-ನೆರವಿನ ಕ್ರಮಗಳನ್ನು ಪರಿಚಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT