ರಾಜ್ಯ

ತುಮಕೂರು: ದರೋಡೆ ಆರೋಪಿಯಿಂದ ಪೋಲೀಸರ ಮೇಲೆ ಹಲ್ಲೆ ಯತ್ನ, ಕಾಲಿಗೆ ಗುಂಡಿಕ್ಕಿ ಬಂಧಿಸಿದ ಖಾಕಿಪಡೆ

ಪ್ರಕರಣವೊಂದರ ಸ್ಥಳ ಮಹಜರು ಮಾಡುತ್ತಿದ್ದ ವೇಳೆ ಆರೋಪಿ ಪೋಲೀಸರ ಮೇಲೇ ಹಲ್ಲೆ ನಡೆಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಈ ಸಮಯದಲ್ಲಿ ಪೋಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.

ತುಮಕೂರು: ಪ್ರಕರಣವೊಂದರ ಸ್ಥಳ ಮಹಜರು ಮಾಡುತ್ತಿದ್ದ ವೇಳೆ ಆರೋಪಿ ಪೋಲೀಸರ ಮೇಲೇ ಹಲ್ಲೆ ನಡೆಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಈ ಸಮಯದಲ್ಲಿ ಪೋಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.

ತುಮಕೂರು ಸಿದ್ದಗಂಗಾ ಮಠದ ಸನಿಹದಲ್ಲಿ ಆರೋಪಿ ರೋಹಿತ್ ಪೋಲೀಸರ ಮೇಲೆ ಹಲ್ಲೆ ಮಾಡಿದ್ದ, ಈ ವೇಳೆ ಸ್ಥಳದಲ್ಲಿದ್ದ ನಾಲ್ವರು ಪೋಲೀಸರ;ಲ್ಲಿ ಒಬ್ಬರಾದ ಹನುಮರಂಗಯ್ಯ ಅವರಿಗೆ ತೀವ್ರ ಗಾಯವಾಗಿದೆ, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವಿವರ

ತುಮಕೂರಿನ ಶಿರಾ ಗೇಟ್ ಸಮೀಪ ವಾಲ್ಮೀಕಿ ನಗರದಲ್ಲಿ ನಡೆದಿದ್ದ ಮನೆ ದರೋಡೆ ಹಾಗೂ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ರೋಹಿತ್ ಎಂಬಾತನ ಬಂಧನವಾಗಿತ್ತು. ಆರೋಪಿಯು ತಾನು ಕಳ್ಳತನ ಮಾಡಿದ್ದ ಮೊಬೈಲ್ ಗಳನ್ನು ಸಿದ್ದಗಂಗಾ ಮಠದ ಸಮೀಪ ರಸ್ತೆಯಲ್ಲಿ ಎಸೆದಿದ್ದಾಗಿ ಹೇಳಿದ್ದ. ಹಾಗಾಗಿ ಸ್ಥಳ ಮಹಜರಿಗಾಗಿ ಆರೋಪಿಯೊಂದಿಗೆ ಪೋಲೀಸರು ಆ ಸ್ಥಳಕ್ಕೆ ತೆರಳಿದ್ದರು.  ಆದರೆ ಅಲ್ಲಿ ಆತ ಪೋಲೀಸರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ, 

ಇದಕ್ಕೆ ಪ್ರತಿಯಾಗಿ ಸಿಪಿಐ ಮುನಿರಾಜು ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಆರೋಪಿ ಶರಣಗುವಂತೆ ಕೇಳಿದ್ದಾರೆ. ಆದರೆ ರೋಹಿತ್ ಒಪ್ಪದ ಹಿನ್ನೆಲೆ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿಯನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ರವಾನಿದಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT