ಹಂಪಿಗೆ ನೀತಿ ಆಯೋಗದ ಸಿಇಒ ಭೇಟಿ 
ರಾಜ್ಯ

ಹಂಪಿಯದ್ದು ಮಂತ್ರಮುಗ್ದಗೊಳಿಸುವ ಅದ್ಭುತ ಸೌಂದರ್ಯ: ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್

ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಭ್ ಕಾಂತ್ ಹಂಪಿಯ ಸೌಂದರ್ಯವನ್ನು ವೀಕ್ಷಣೆ ಮಾಡಿದರು. ವಿಶ್ವಪಾರಂಪರಿಕ ತಾಣದ ಕುರಿತು ಅವರು ಮೆಚ್ಚುಗೆ ಸೂಚಿಸಿದರು. 

ಬಳ್ಳಾರಿ: ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಭ್ ಕಾಂತ್ ಹಂಪಿಯ ಸೌಂದರ್ಯವನ್ನು ವೀಕ್ಷಣೆ ಮಾಡಿದರು. ವಿಶ್ವಪಾರಂಪರಿಕ ತಾಣದ ಕುರಿತು ಅವರು ಮೆಚ್ಚುಗೆ ಸೂಚಿಸಿದರು. 

ಶನಿವಾರ ಮತ್ತು ಭಾನುವಾರ ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಹಂಪಿ ಪ್ರವಾಸ ಕೈಗೊಂಡಿದ್ದರು. ಕುಟುಂಬ ಸಮೇತ ಶನಿವಾರ ಹಂಪಿಗೆ ಆಗಮಿಸಿದ್ದ ಅವರು ಪ್ರಮುಖ ಸ್ಮಾರಕಗಳ ವೀಕ್ಷಣೆ ನಡೆಸಿದರು. ಪ್ರವಾಸಿ ತಾಣದ ನಿರ್ವಹಣೆ ಬಗ್ಗೆ ಮಾಹಿತಿ ಪಡೆದರು.

ಬ್ಯಾಟರಿ ಚಾಲಿತ ವಾಹನದಲ್ಲಿ ಹಂಪಿ ವೀಕ್ಷಿಸಿ ಭಾನುವಾರವೂ ಸಹ ಹಂಪಿಯ ವಿವಿಧ ಸ್ಮಾರಕಗಳ ವೀಕ್ಷಣೆಯನ್ನು ಅವರು ನಡೆಸಿದರು. ಹಂಪಿಯ ಪ್ರಸಿದ್ಧ ಕಲ್ಲಿನ ರಥದ ಮುಂದೆ ಅವರು ಫೋಟೋ ತೆಗೆಸಿಕೊಂಡರು. 

ಹಂಪಿ ವೀಕ್ಷಣೆ ಬಳಿಕ ಮಾತನಾಡಿದ ಅಮಿತಾಭ್ ಕಾಂತ್, "ಹಂಪಿಯ ಸೌಂದರ್ಯವನ್ನು ನೋಡಲು ಎರಡು ದಿನಗಳ ಸಮಯ ಸಾಕಾಗುವುದಿಲ್ಲ, ಕೆಲವು ದಿನಗಳ ಕಾಲ ರಜೆ ಬೇಕು. ಇಲ್ಲಿಯ ನಿರ್ವಹಣೆಯೂ ಚೆನ್ನಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...." ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾ ನೇರಾ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು, ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಧರ್ಮಸ್ಥಳ ಪ್ರಕರಣ: ಹೊಸ ದೂರು ದಾಖಲು, ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ!

ಮಂಗಳೂರು: KSRTC ಬಸ್ ಬ್ರೇಕ್ ಫೇಲ್; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು; Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆ- EY ವರದಿ

SCROLL FOR NEXT